ಅಫಜಲಪುರ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ದೇವಲಗಾಣಗಾಪುರ ಸಮೀಪದ ಭೀಮಾ ನದಿಯ ಪಾಪನಾಶಿನಿಯಲ್ಲಿ ಹಾಸಿಗೆ ತೊಳೆಯಲು ಹೋಗಿದ್ದ ಶಶಿಕುಮಾರ ಡಾಂಗೆ ಎಂಬಾತ ನೀರು ಪಾಲಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ದೇವಲಗಾಣಗಾಪುರದ ನಿವಾಸಿಗಳಾದ ಶಶಿಕುಮಾರ ಹಾಗೂ ಶರಣು ಅರ್ಜುನಗಿ ಇಬ್ಬರೂ ಸೇರಿ ನದಿಯಲ್ಲಿ ಹಾಸಿಗೆ–ಹೊದಿಕೆಗಳನ್ನು ತೊಳೆಯುತ್ತಿದ್ದರು. ಈ ವೇಳೆ ಶಶಿಕುಮಾರ ಕಾಲು ಜಾರಿ ನದಿಯಲ್ಲಿ ಮುಳುಗಿದ್ದಾರೆ. ಅವರನ್ನು ರಕ್ಷಿಸಲು ಶರಣು ಕೂಡ ನದಿಗೆ ದುಮುಕಿದ್ದಾರೆ. ಈ ವೇಳೆ ಅಲ್ಲಿಗೆ ಧಾವಿಸಿದ್ದ ಅಗ್ನಿಶಾಮಕ ದಳದವರು, ಶರಣು ಅವರನ್ನು ರಕ್ಷಿಸಿದ್ದಾರೆ.
ಶಶಿಕುಮಾರ ಡಾಂಗೆ ದೇಹ ಇನ್ನೂ ಪತ್ತೆಯಾಗಿಲ್ಲ. ಪತ್ತೆ ಕಾರ್ಯಚರಣೆ ಮುಂದುವರಿದಿದೆ ಎಂದು ದೇವಲ ಗಾಣಗಾಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.