
ಪ್ರಜಾವಾಣಿ ವಾರ್ತೆಯಡ್ರಾಮಿ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಯತ್ನಾಳ ಗ್ರಾಮದಲ್ಲಿ ಹಾವು ಕಚ್ಚಿ ಶರಣಪ್ಪ ಭೀಮಪ್ಪ ಬಡಿಗೇರ (34) ಎಂಬುವವರು ಮೃತಪಟ್ಟಿದ್ದಾರೆ.
ಅವರಿಗೆ ಇಬ್ಬರು ಪುತ್ರಿಯರು, ಪುತ್ರ ಇದ್ದಾರೆ. ಶರಣಗೌಡ ಪೊಲೀಸ್ ಪಾಟೀಲ ಅವರ ಹೊಲದಲ್ಲಿ ಕೂಲಿ ಕೆಲಸ ಮಾಡುವ ವೇಳೆ ಕಚ್ಚಿದೆ. ನಂತರ ಹೊಲದಿಂದ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಈ ಕುರಿತು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.