ADVERTISEMENT

ಕಲಬುರ್ಗಿ | ‘ಮನೆಯಲ್ಲೇ ರಂಜಾನ್‌ ಪ್ರಾರ್ಥನೆ ಮಾಡಿ’

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2020, 17:20 IST
Last Updated 25 ಏಪ್ರಿಲ್ 2020, 17:20 IST
ಪ್ರಿಯಾಂಕ್‌ ಖರ್ಗೆ
ಪ್ರಿಯಾಂಕ್‌ ಖರ್ಗೆ   

ಕಲಬುರ್ಗಿ: ‘ಪವಿತ್ರ ರಮಜಾನ್ ಮಾಸಾಚರಣೆಯ ಪದ್ಧತಿ ಹಾಗೂ ಪ್ರಾರ್ಥನೆಯನ್ನು ಮನೆಯಲ್ಲೇ ಆಚರಿಸುವ ಮೂಲಕ, ಮುಸ್ಲಿಂ ಸಮುದಾಯದವರು ಕೊರೊನಾ ನಿಯಂತ್ರಣಕ್ಕೆ ಸಹಕರಿಸಬೇಕು’ ಎಂದು ಶಾಸಕ ಪ್ರಿಯಾಂಕ್‌ ಖರ್ಗೆ ಮನವಿ ಮಾಡಿದ್ದಾರೆ.

‘ಈ ಪವಿತ್ರ ಮಾಸವು ನಾಡಿನೆಲ್ಲೆಡೆ ಸುಖ, ಶಾಂತಿ, ಸಮೃದ್ಧಿ ತರಲಿ ಎಂದು ಪ್ರಾರ್ಥಿಸುತ್ತೇನೆ. ಕೊರೊನಾ ಸೋಂಕು ದೇಶದೆಲ್ಲೆಡೆ ಭೀತಿ ಉಂಟು ಮಾಡಿದ್ದು, ನಾವೆಲ್ಲರೂ ಈ ಮಹಾಮಾರಿಯ ವಿರುದ್ಧ ಒಟ್ಟಾಗಿ ಹೋರಾಟ ಮಾಡಬೇಕಿದೆ. ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಮುಸಲ್ಮಾನ್‌ ಸಹೋದರರು ತಮ್ಮ ತಮ್ಮ ಮನೆಗಳಲ್ಲಿಯೇ ಪ್ರಾರ್ಥನೆ ಸಲ್ಲಿಸಬೇಕು’ ಎಂದೂ ಅವರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT