ಚಿಂಚೋಳಿ: ತಾಲ್ಲೂಕಿನ ಪ್ರವಾಹ ಪೀಡಿತ ಗ್ರಾಮಗಳಿಗೆ ಶಾಸಕ ಡಾ. ಅವಿನಾಶ ಜಾಧವ ಗುರುವಾರ ಭೇಟಿ ನೀಡಿ ಪ್ರವಾಹದಿಂದ ಉಂಟಾದ ಹಾನಿ ಪರಿಶೀಲಿಸಿದರು.
ಮನೆಗಳಿಗೆ ನೀರು ನುಗ್ಗಿ ಬದುಕು ದುಸ್ತರಗೊಂಡ ಜನರ ಬವಣೆ ಆಲಿಸಿ ಧೈರ್ಯ ತುಂಬಿದರು.
ಸರ್ಕಾರಕ್ಕೆ ಹಾನಿಯ ವರದಿ ಸಲ್ಲಿಸಿ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಅವರು, ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುವಂತೆ ಸ್ಥಳದಲ್ಲಿದ್ದ ಉಪ ವಿಭಾಗಾಧಿಕಾರಿ ರಮೇಶ ಕೋಲಾರ ಮತ್ತು ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ ಅವರಿಗೆ ಸೂಚಿಸಿದರು.
ಶಾಸಕರು ನಾಗಾಈದಲಾಯಿ, ದೇಗಲಮಡಿ, ಕಲ್ಲೂರು ರೋಡ, ಚಿಂಚೋಳಿ, ಕೊಳ್ಳೂರು ಮೊದಲಾದ ಕಡೆ ಭೇಟಿ ನೀಡಿದರು.
ಕಾರ್ಯ ನಿರ್ವಾಹಕ ಅಧಿಕಾರಿ ಅನಿಲ ರಾಠೋಡ್, ಬಿಜೆಪಿ ಮುಖಂಡರಾದ ವೀರಾರೆಡ್ಡಿ ಪಾಟೀಲ, ಅಲ್ಲಮಪ್ರಭು ಹುಲಿ, ಜಗದೀಶಸಿಂಗ್ ಠಾಕೂರು, ವಿಶ್ವನಾಥ ಈದಲಾಯಿ, ಉದಯ ಸಿಂಧೋಲ, ರಾಕೇಶ ಗೋಸುಲ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.