ಚಿತ್ತಾಪುರ(ಕಲಬುರಗಿ): ತಾಲ್ಲೂಕಿನ ಮೊಗಲಾ ಗ್ರಾಮ ಸಮೀಪದ ರೈಲು ಹಳಿ ಮೇಲೆ ಇದ್ದ ಕುರಿಗಳ ಮೇಲೆ ರೈಲು ಹರಿದು 70 ಕುರಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ.
ಮಲ್ಲಪ್ಪ ಹಣಮಂತ, ರಾಘವೇಂದ್ರ ಉಮೇಶ ಬಡಿಗೇರ, ಶ್ರೀದೇವಿ ರಾಜು, ರಾಮಲಿಂಗ ಕಲ್ಲಪ್ಪ, ಗೌಸ್ಮಿಯ್ಯಾ ಇಮಾಮ್ಸಾಬ್, ಶಿವಕಾಂತಮ್ಮ ಅರ್ಜುನ ಮತ್ತು ಅಶೋಕ ಮೊಗಲಯ್ಯಾ ಅವರಿಗೆ ಸೇರಿದ ಕುರಿಗಳು ಮೃತಪಟ್ಟಿವೆ ಎಂದು ತಿಳಿದು ಬಂದಿದೆ.
ಬೆಂಗಳೂರಿನಿಂದ ಬರುತ್ತಿದ್ದ ಬೆಂಗಳೂರು-ನಾಂದೇಡ್ ಲಿಂಕ್ ಎಕ್ಸ್ಪ್ರೆಸ್ ರೈಲು ಮಧ್ಯಾಹ್ನ 12ರ ವೇಳೆಗೆ ಕುರಿಗಳ ಮೇಲೆ ಹರಿದಿದೆ.
ಸ್ಥಳಕ್ಕೆ ದಕ್ಷಿಣ ಮಧ್ಯ ರೈಲ್ವೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.