ADVERTISEMENT

ಕಲಬುರ್ಗಿ: ಕೊಡಲಿಯಿಂದ ಕೊಚ್ಚಿ ಕೊಲೆ ಭೀಕರ ಕೊಲೆ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2020, 14:55 IST
Last Updated 30 ಆಗಸ್ಟ್ 2020, 14:55 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕಲಬುರ್ಗಿ: ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಸಂಗಾಪುರ ಗ್ರಾಮದ ಹೊರವಲಯದಲ್ಲಿ ಬಾಬು ಮಲ್ಲೇಶಪ್ಪ ಕೋಬಾ (35) ಎಂಬುವವರನ್ನು ದುಷ್ಕರ್ಮಿಗಳು ಕೊಡಲಿಯಿಂದ ಕೊಚ್ಚಿ ಭಾನುವಾರ ಸಂಜೆ ಕೊಲೆ ಮಾಡಿದ್ದಾರೆ.

ಘಟನೆಗೆ ಹಳೆ ವೈಷಮ್ಯ ಕಾರಣವಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸಂಗಾಪುರ ಗ್ರಾಮದಿಂದ ಹೋಗುತ್ತಿದ್ದ ಬಾಬು ಅವರನ್ನು ತಡೆದ ದುಷ್ಕರ್ಮಿಗಳು ಕೊಡಲಿಯಿಂದ ಕುತ್ತಿಗೆಗೆ ಕೊಚ್ಚಿದ್ದಾರೆ. ಇದರಿಂದಾಗಿ ರುಂಡ ಹಾಗೂ ಮುಂಡಗಳು ಬೇರ್ಪಟ್ಟಿದ್ದು, ಕೊಲೆಗೆ ಬಳಸಿದ ಕೊಡಲಿಯನ್ನು ಅಲ್ಲಿಯೇ ಎಸೆದು ಪರಾರಿಯಾಗಿದ್ದಾರೆ. ಗಾಣಗಾಪುರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT