ಕಲಬುರಗಿ: ನಗರದ ಶಹಾ ಬಜಾರದಲ್ಲಿ ಯುವಕನನ್ನು ಶುಕ್ರವಾರ ಬೆಳಗಿನ ಜಾವ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಮಲ್ಲಿಕಾರ್ಜುನ ಬಿರಾದಾರ ಕೊಲೆಯಾದವರು. ಸ್ವಾದಿ ಗಲ್ಲಿ ನಿವಾಸಿಯಾಗಿದ್ದರು. ಕಳೆದ ರಾತ್ರಿ ಮನೆಯಿಂದ ಹೊರ ಹೋಗುವುದಾಗಿ ಹೇಳಿ ಹೋಗಿದ್ದರು.
ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಚೌಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.