ಕಲಬುರ್ಗಿ: ಕಲಬುರ್ಗಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿಯ ಕಾರ್ಯದರ್ಶಿಯಾಗಿ ಡಾ.ಎನ್.ವಿ. ಪ್ರಸಾದ್ ಬುಧವಾರ ಅಧಿಕಾರ ಸ್ವೀಕರಿಸಿದರು.
ಆಂಧ್ರಪ್ರದೇಶದವರಾದ 2004ನೇ ಬ್ಯಾಚಿನ ಕರ್ನಾಟಕ ಕೇಡರ್ನ ಐಎಎಸ್ ಅಧಿಕಾರಿ ಪ್ರಸಾದ್ ಪ್ರೊಬೇಷನರಿ ಅವಧಿಯನ್ನು ಕಲಬುರ್ಗಿ ಜಿಲ್ಲೆಯಲ್ಲಿ ಪೂರ್ಣಗೊಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸಹಾಯಕ ಆಯುಕ್ತರಾಗಿ, ರಾಯಚೂರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ, ಗದಗ, ಚಿತ್ರದುರ್ಗ, ಕೊಡಗು, ದಾವಣಗೆರೆ ಹಾಗೂ ಕಲಬುರ್ಗಿ ಜಿಲ್ಲೆಗಳ ಜಿಲ್ಲಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ.
ಕೆ.ಎಫ್.ಎಸ್.ಸಿ. ವ್ಯವಸ್ಥಾಪಕ ನಿರ್ದೇಶಕರಾಗಿ, ಅಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಆಯುಕ್ತರಾಗಿ, ಕರ್ನಾಟಕ ಸಾರ್ವಜನಿಕ ಭೂ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಆಯುಕ್ತಾಲಯದ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ.
ಈ ಮೊದಲು ಪ್ರಾದೇಶಿಕ ಆಯುಕ್ತರಾಗಿದ್ದ ಸುಬೋಧ ಯಾದವ್ ಕೇಂದ್ರ ಸೇವೆಗೆ ನಿಯೋಜನೆಗೊಂಡಿದ್ದು, ಜಲಶಕ್ತಿ ಮಂತ್ರಾಲಯದ ಜಂಟಿ ಕಾರ್ಯದರ್ಶಿಯಾಗಿ ವರ್ಗಾವಣೆಯಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.