ADVERTISEMENT

ಕಲಬುರ್ಗಿ ಸೇರಿ 33 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಚಾಲನೆ ನೀಡಿದ ಗಡ್ಕರಿ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2020, 3:32 IST
Last Updated 20 ಡಿಸೆಂಬರ್ 2020, 3:32 IST
ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ಶನಿವಾರ ನಡೆಸಿದ ವಿಡಿಯೊ ಸಂವಾದದಲ್ಲಿ ಕಲಬುರ್ಗಿಯಿಂದ ಸಂಸದ ಡಾ.ಉಮೇಶ ಜಾಧವ, ಶಾಸಕರು ಹಾಗೂ ಅಧಿಕಾರಿಗಳು ಪಾಲ್ಗೊಂಡರು
ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ಶನಿವಾರ ನಡೆಸಿದ ವಿಡಿಯೊ ಸಂವಾದದಲ್ಲಿ ಕಲಬುರ್ಗಿಯಿಂದ ಸಂಸದ ಡಾ.ಉಮೇಶ ಜಾಧವ, ಶಾಸಕರು ಹಾಗೂ ಅಧಿಕಾರಿಗಳು ಪಾಲ್ಗೊಂಡರು   

ಕಲಬುರ್ಗಿ: ವಿಜಯಪುರ– ಕಲಬುರ್ಗಿ– ಹುಮನಾಬಾದ್‌ ರಾಷ್ಟ್ರೀಯ ಹೆದಾರಿಯೂ ಸೇರಿದಂತೆ ರಾಜ್ಯದ 33 ರಾಷ್ಟೀಯ ಹೆದ್ದಾರಿಗಳ ಯೋಜನೆಗಳಿಗೆ ಶನಿವಾರ ಕೇಂದ್ರ ರಸ್ತೆ ಸಾರಿಗೆ, ರಾಷ್ಟೀಯ ಹೆದ್ದಾರಿ ಹಾಗೂ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ನಿತೀನ್ ಗಡ್ಕರಿ ಅವರು ವರ್ಚುವಲ್ ಮೀಟಿಂಗ್ ಮೂಲಕ ಚಾಲನೆ ನೀಡಿದರು.

ಇದೇ ವೇಳೆ ಅವರು 25 ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಪೂರ್ಣಗೊಂಡ 8 ಹೆದ್ದಾರಿಗಳನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡಿದರು. ರಾಜ್ಯದ 33 ರಾಷ್ಟ್ರೀಯ ಹೆದ್ದಾರಿಗಳ 1197 ಕೀ.ಮಿ ಉದ್ದದ ರಸ್ತೆಗೆ ₹ 10,904 ಕೋಟಿ ವೆಚ್ಚ ಮಾಡಲಾಗುತ್ತಿದ್ದು, ಇದು 2022ರ ಹೊತ್ತಿಗೆ ಪೂರ್ಣಗೊಳ್ಳಲಿವೆ ಎಂದು ಸಚಿವರು ತಿಳಿಸಿದರು.

ಹೊಸ ಎಥೆನಾಲ್ ನೀತಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆ ₹ 22 ಇದ್ದು, ಕೇಂದ್ರ ಸರ್ಕಾರ ₹ 34 ನೀಡಿ ಖರೀದಿಸುತ್ತಿದೆ. ಇದರಿಂದ ಹೆಚ್ಚಿನ ಆರ್ಥಿಕ ಹೊರೆಯಾಗುತ್ತಿದ್ದು, ಇದನ್ನು ತಪ್ಪಿಸಲು ಹೊಸ ಎಥೆನಾಲ್ ಉತ್ಪಾದನೆಗೆ ನೀತಿಯೊಂದನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ. ಕರ್ನಾಟಕದಲ್ಲಿ ಹೆಚ್ಚಿನ ಕಬ್ಬು ಬೆಳೆಯುವುದರಿಂದ ಇಲ್ಲಿ ಸಕ್ಕರೆ ಕಾರ್ಖಾನೆಗಳು ಹೆಚ್ಚಿದ್ದು, ಪೆಟ್ರೋಲ್‍ಗೆ ಪರ್ಯಾಯವಾಗಿ ಎಥೆನಾಲ್ ಬಳಕೆಗೆ ಕರ್ನಾಟಕ ಸರ್ಕಾರವು ಮುಂದಾಗಬೇಕು’ ಎಂದರು.

ADVERTISEMENT

ಸಂಸದ ಡಾ.ಉಮೇಶ ಜಾಧವ, ಶಾಸಕರಾದ ಎಂ.ವೈ ಪಾಟೀಲ, ಬಸವರಾಜ ಮತ್ತಿಮೂಡ, ಡಾ.ಅವಿನಾಶ ಜಾಧವ, ವಿಧಾನ ಪರಿಷತ್‌ ಸದಸಸ್ಯರಾದ ಬಿ.ಜಿ ಪಾಟೀಲ, ಶಶೀಲ್ ಜಿ. ನಮೋಶಿ, ಕರ್ನಾಟಕ ನವೀಕರಿಸಬಹುದಾದ ಇಂಧನ ನಿಯಮಿತದ ಅಧ್ಯಕ್ಷ ಚಂದು ಪಾಟೀಲ, ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ, ಮಹಾನಗರ ಪಾಲಿಕೆಯ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ, ಎನ್.ಎಚ್.ಎ.ಐ ಅನುಷ್ಠಾಮ ಕಚೇರಿಯ ವ್ಯವಸ್ಥಾಪಕ ಚಾರ್ಲ್ಸ್ ಜೆ., ಇಂಜಿನೀಯರ್ ಪ್ರದೀಪ ಹಿರೇಮಠ ಸೇರಿದಂತೆ ಇನ್ನಿತರ ಅಧಿಕಾರಿಗಳು ಕಲಬುರ್ಗಿಯಿಂದ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.