ADVERTISEMENT

ನಿಜಾಮುದ್ದೀನ್ ಪ್ರಕರಣ: ಸ್ವಯಂ ತಪಾಸಣೆಗೊಳಗಾಗದಿದ್ದರೆ ಕಠಿಣ ಕ್ರಮ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2020, 9:20 IST
Last Updated 3 ಏಪ್ರಿಲ್ 2020, 9:20 IST

ಕಲಬುರ್ಗಿ:ಕರ್ನಾಟಕದಲ್ಲಿ ದಿನೇ ದಿನೇ ಕೊರೊನಾ ವೈರಸ್ ಹೆಚ್ಚಾಗುತ್ತಿರುವ ಕಾರಣ ನಿಜಾಮುದ್ದೀನ್ ಧರ್ಮ ಸಭೆಯಲ್ಲಿ ಭಾಗವಹಿಸಿದವರು ಹಾಗೂ ಹೊರ ರಾಜ್ಯ ಮತ್ತು ಹೊರದೇಶಗಳಿಂದ ಬಂದಂತಹವರು ಕಡ್ಡಾಯವಾಗಿ ಸ್ವಯಂ ಪ್ರೇರಣೆಯಿಂದ ವೈದ್ಯಕೀಯ ತಪಾಸಣೆಗೊಳಗಾಗಲು ವಿನಂತಿಸುತ್ತೇನೆ ಎಂದು ಉಪಮುಖ್ಯಮಂತ್ರಿಗೋವಿಂದ ಎಂ ಕಾರಜೋಳ ಅವರು ತಿಳಿಸಿದ್ದಾರೆ.

ಅಂತಹವರನ್ನು ವೈದ್ಯಕೀಯ ತಪಾಸಣೆಗೊಳಗಾಗುವುದನ್ನು ನಿರ್ಲಕ್ಷಿಸಿದಲ್ಲಿ ತಮ್ಮ ಜೀವಕ್ಕೂ ಮತ್ತು ತಮ್ಮ ಬಂಧು ಬಳಗದವರ ಜೀವಕ್ಕೂ ತೊಂದರೆ ಮಾಡಿದಂತಾಗುತ್ತದೆ. ಅಲ್ಲದೇ ಸಮುದಾಯದ ಸ್ವಾಸ್ಥ್ಯವನ್ನು ಹಾಳುಮಾಡಿದಂತಾಗುತ್ತದೆ. ಕಾರಣ ಎಲ್ಲಾ ಮಹನೀಯರು ಸಹಕರಿಸಲು ಮತ್ತೊಮ್ಮೆ ಮನವಿ ಮಾಡುತ್ತೇನೆ.

ತಪ್ಪಿದಲ್ಲಿ ಅಂತಹವವರಿಗೆ ಕಠಿಣ ಶಿಕ್ಷೆ ವಿಧಿಸಲು ಸರ್ಕಾರ ಈಗಾಗಲೇ ಜಿಲ್ಲಾಡಳಿತಗಳಿಗೆ ಮತ್ತು ತಾಲೂಕು ಆಡಳಿತಗಳಿಗೆ ಸೂಚನೆ ನೀಡಲಾಗಿದೆ ಎನ್ನುವ ಎಚ್ಚರಿಕೆಯನ್ನು ಕೊಡಬಯಸುತ್ತೇನೆ. ಸಾರ್ವಜನಿಕರು ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರ ಸೂಚಿಸಿರುವ ಎಲ್ಲಾ ನಿಯಮಗಳನ್ನು ಪಾಲಿಸಿ ಮನೆಯಲ್ಲೇ ಇದ್ದು ಸಹಕರಿಸಬೇಕು ಎಂದು ಮತ್ತು ದಿನಾಂಕ 5.4.2020 ರಂದು ರಾತ್ರಿ 9 ಗಂಟೆಗೆ ಪ್ರಧಾನ ಮಂತ್ರಿಗಳು ಹೇಳಿರುವ ಸೂಚನೆಯನ್ನು ತಪ್ಪದೇ ಪಾಲಿಸಿ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.