ಆಳಂದ: ಸರ್ಕಾರದ ಹಲವು ಯೋಜನೆಗಳ ಸದುಪಯೋಗಕ್ಕಾಗಿ ಗ್ರಾಮೀಣ ಭಾಗದ ಜನರು ಮುಖ್ಯವಾಗಿ ಯೋಜನೆಗಳ ಕುರಿತು ಜಾಗೃತಿ ಹೊಂದವದು ಅಗತ್ಯವಾಗಿದೆ ಎಂದು ಶಾಸಕ ಸುಭಾಷ ಗುತ್ತೇದಾರ ತಿಳಿಸಿದರು.
ತಾಲ್ಲೂಕಿನ ಗಡಿಗ್ರಾಮ ಶಿರೂರು(ಜಿ) ಗ್ರಾಮದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಶನಿವಾರ ಏರ್ಪಡಿಸಿದ ಗ್ರಾಮವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಂಧ್ಯಾಸುರಕ್ಷಾ, ಅಂಗವಿಕಲರ ವೇತನ ಹಾಗೂ ವಿಧವಾ ವೇತನ ಸೌಲಭ್ಯಗಳು ಈ ಗ್ರಾಮ ವಾಸ್ತವ್ಯ ಹಾಗೂ ಜನಸಂಪರ್ಕ ಸಭೆಗಳ ಮೂಲಕ ಸ್ಥಳದಲ್ಲಿ ಸೌಲಭ್ಯಗಳು ಅರ್ಹರಿಗೆ ದೊರೆಯಲಿವೆ ಎಂದರು.
ತಹಶೀಲ್ದಾರ್ ಯಲ್ಲಪ್ಪ ಸುಬೇದಾರ ಮಾತನಾಡಿ, ಭಾಗ್ಯಲಕ್ಷ್ಮಿ ಯೋಜನೆ, ಮನಸ್ವಿನಿ, ಮೈತ್ರಿ ಸೇರಿದಂತೆ ಅಂತ್ಯಸಂಸ್ಕಾರ ಸಹಾಯಧನ ಯೋಜನೆಗಳ ಲಾಭವನ್ನು ಅರ್ಹ ಫಲಾನುಭವಿಗಳೂ ಪಡೆದುಕೊಳ್ಳಬೇಕು. ಸರ್ಕಾರದ ಸೌಲಭ್ಯಗಳ ಯಶಸ್ವಿಗಾಗಿ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.
ಉಪ ತಹಶೀಲ್ದಾರ್ ಬಸವರಾಜ ರಕ್ಕಸಗಿ, ಶರಣಬಸಪ್ಪ ಹಕ್ಕಿ, ಅಲ್ಲಾವುದ್ದಿನ್, ದತ್ತಾ, ಮುಖಂಡರಾದ ಮಲ್ಲಿಕಾರ್ಜುನ ಕಂದಗೋಳೆ ಇದ್ದರು. ವಿವಿಧ ಪಿಂಚಣಿ ಸೌಲಭ್ಯ ಸೇರಿದಂತೆ ಹಲವು ಸೌಲಭ್ಯ ಸ್ಥಳದಲ್ಲಿ ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಮಂಜೂರು ಮಾಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.