ADVERTISEMENT

ರಾಜ್ಯ ಪತ್ರಾಗಾರ ಇಲಾಖೆಯ ವಿಭಾಗೀಯ ಕಚೇರಿ ತೆರೆಯಲು ಅನುಮೋದನೆ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2021, 8:26 IST
Last Updated 26 ಫೆಬ್ರುವರಿ 2021, 8:26 IST
ರಾಷ್ಟ್ರೀಯ ವಿಚಾರ ಸಂಕಿರಣ
ರಾಷ್ಟ್ರೀಯ ವಿಚಾರ ಸಂಕಿರಣ   

ಚಿಂಚೋಳಿ: ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆಯ ವಿಭಾಗೀಯ ಕಚೇರಿ ಕಲಬುರ್ಗಿಯಲ್ಲಿ ಮುಂದಿನ ವರ್ಷ ತೆರೆಯಲಾಗುವುದು ಇದಕ್ಕೆ ರಾಜ್ಯ ಸರ್ಕಾರದಿಂದ ಅನುಮೋದನೆ ದೊರಕಿದೆ ಎಂದು ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಡಾ. ವೀರಶೆಟ್ಟಿ ಗಾರಂಪಳ್ಳಿ ತಿಳಿಸಿದರು.

ಅವರು ತಾಲ್ಲೂಕಿನ ಸುಲೇಪೇಟ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗ ಮತ್ತು ಪತ್ರಾಗಾರ ಇಲಾಖೆಯ ಆಶ್ರಯದಲ್ಲಿ ಶುಕ್ರವಾರ ನಡೆದ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ಕಲ್ಯಾಣ ಕರ್ನಾಟಕ( ಹೈಕ) ಭಾಗದ ಚರಿತ್ರೆಯ ದಾಖಲೆಗಳು ಈ ಭಾಗದಲ್ಲಿ ನಡೆದ ಸೇನಾ ಕಾರ್ಯಾಚರಣೆಯಿಂದ ದಾಖಲೆಗಳು ದೆಹಲಿ, ಪುಣೆ ಮತ್ತು ಹೈದರಾಬಾದ್‌ಗೆಕೊಂಡೊಯ್ಯಲಾಗಿದೆ. ಇವುಗಳನ್ನು ವಾಪಸ್ ತರಲು ವಿಭಾಗೀಯ ಕಚೇರಿ ನೆರವಾಗಲಿದೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.