ಚಿಂಚೋಳಿ: ತಾಲ್ಲೂಕಿನ ಬೆನಕೆಪಳ್ಳಿ ಬಳಿ ಶನಿವಾರ ಸಂಜೆ ಜೀಪ್ನಿಂದ ಇಳಿಯುವಾಗ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಬೆನಕೆಪಳ್ಳಿಯ ರೇವಣಸಿದ್ದಪ್ಪರೆಡ್ಡಿ (32) ಮೃತ ವ್ಯಕ್ತಿ. ಜೀಪ್ನಿಂದ ಇಳಿಯುವಾಗ ಬಿದ್ದರೂ ವ್ಯಕ್ತಿಯ ನೆರವಿಗೆ ಬಾರದ ಚಾಲಕ ಜೀಪ್ ಓಡಿಸಿಕೊಂಡು ಹೋಗಿದ್ದಾನೆ. ಈ ಕುರಿತು ಭಾನುವಾರ ಚಾಲಕನ ನಿರ್ಲಕ್ಷ್ಯದ ವಿರುದ್ಧ ಚಿಂಚೋಳಿ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ರಾಜಶೇಖರ ರಾಠೋಡ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.