ADVERTISEMENT

ಶಾಂತಿ ಕದಡಿಸಿದರೆ ಕಾನೂನು ಕ್ರಮ: ಪೊಲೀಸ್‌

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2019, 13:48 IST
Last Updated 6 ನವೆಂಬರ್ 2019, 13:48 IST
ಸೇಡಂನ ಪೊಲೀಸ್ ಠಾಣೆಯಲ್ಲಿ ಬುಧವಾರ ಶಾಂತಿ ಸಭೆಯಲ್ಲಿ ಸಿಪಿಐ ಶಂಕರಗೌಡ ಪಾಟೀಲ ಮಾತನಾಡಿದರು
ಸೇಡಂನ ಪೊಲೀಸ್ ಠಾಣೆಯಲ್ಲಿ ಬುಧವಾರ ಶಾಂತಿ ಸಭೆಯಲ್ಲಿ ಸಿಪಿಐ ಶಂಕರಗೌಡ ಪಾಟೀಲ ಮಾತನಾಡಿದರು   

ಸೇಡಂ: ‘ಸಮಾಜದಲ್ಲಿ ವಿವಿಧ ಧರ್ಮ ಹಾಗೂ ಸಮಾಜದವರು ತಮ್ಮದೇ ಆದ ಸಂಪ್ರದಾಯ, ಪದ್ಧತಿಯಂತೆ ಹಬ್ಬಗಳನ್ನು ಆಚರಿಸುತ್ತಾರೆ. ಇಂತಹ ಸಂದರ್ಭಗಳಲ್ಲಿ ಯಾರೇ ಆಗಲಿ ಶಾಂತಿ ಕದಡಿಸುವ ದುಸ್ಸಾಹಸಕ್ಕೆ ಮುಂದಾದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಸಿಪಿಐ ಶಂಕರಗೌಡ ಪಾಟೀಲ ಎಚ್ಚರಿಸಿದರು

ಈದ್ ಮಿಲಾದ್ ಹಬ್ಬದ ನಿಮಿತ್ತ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಬುಧವಾರ ಆಯೋಜಿಸಿದ್ಧ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.

‘ಪ್ರತಿಯೊಂದು ಹಬ್ಬಕ್ಕೆ ತನ್ನದೇ ಆದ ಇತಿಹಾಸ ಮತ್ತು ಮಹತ್ವ ಇದೆ. ಹಬ್ಬಗಳನ್ನು ಅರ್ಥೈಸಿಕೊಂಡು ಆಚರಿಸಿದರೆ ಸಮಾಜದಲ್ಲಿ ಸಂಭ್ರಮ ಹೆಚ್ಚುತ್ತದೆ, ಸಂಬಂಧಗಳು ಗಟ್ಟಿಗೊಳ್ಳುತ್ತವೆ. ಸಂಬಂಧಗಳನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಹಬ್ಬಗಳ ಆಚರಣೆಯಾಗಲಿ’ ಎಂದರು.

ADVERTISEMENT

ತಹಶೀಲ್ದಾರ್ ಬಸವರಾಜ ಬೆಣ್ಣೆ ಶಿರೂರ್ ಮಾತನಾಡಿ, ‘ಎಲ್ಲರೂ ಬೆರೆತು ಪ್ರೀತಿಯಿಂದ ಹಬ್ಬವನ್ನು ಆಚರಿಸಬೇಕು. ಹಿರಿಯರ ಮಾರ್ಗದರ್ಶನದಲ್ಲಿ ಕಾನೂನಿನ ಚೌಕಟ್ಟಿನೊಳಗೆ ಸೂಕ್ತ ರೀತಿಯಲ್ಲಿ ಹಬ್ಬ ಆಚರಿಸಬೇಕು’ ಎಂದು ತಿಳಿಸಿದರು.

ಪಿಎಸ್‌ಐ ಸುಶೀಲಕುಮಾರ, ಸಾಹಿತಿ ಜಗನ್ನಾಥ ತರನಳ್ಳಿ, ಮುಖಂಡರಾದ ಜಾವಿದ್ ನಿರ್ನಾವಿ, ಶಂಭುಲಿಂಗ ನಾಟೀಕಾರ, ಶೇಖ್ ಆದಮ್, ಅಶೋಕ ದಂಡೋತಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊಬೇಷನರಿ ಪಿಎಸ್‌ಐ ಸಂಗಮೇಶ ಅಂಗಡಿ, ವಿಶ್ವನಾಥ ಮುದರಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.