ADVERTISEMENT

ಚಿಂಚೋಳಿ: ತೆಲಂಗಾಣ ವ್ಯಕ್ತಿಯ ಕೊಲೆ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2021, 7:23 IST
Last Updated 9 ಆಗಸ್ಟ್ 2021, 7:23 IST

ಚಿಂಚೋಳಿ (ಕಲಬುರ್ಗಿ ಜಿಲ್ಲೆ): ತಾಲ್ಲೂಕಿನ ಮಿರಿಯಾಣ ಬಳಿಯ ಕಲ್ಲುಗಣಿಯಲ್ಲಿ ತೆಲಂಗಾಣ ಪದಪೆದ್ದಮುಲ ಮಂಡಲ ವ್ಯಾಪ್ತಿಯ ಭಾವಿಮುಡಿ ತಾಂಡಾದ ವ್ಯಕ್ತಿಯನ್ನು ಕೊಲೆ ಮಾಡಿದ್ದು, ಸೋಮವಾರ ಶವ ಪತ್ತೆಯಾಗಿದೆ.

ಭದ್ರು ಥಾವರು (45) ಕೊಲೆಯಾದವರು. ಕೊಲೆಗೆ ನಿಖರ ಕಾರಣ, ಆರೋಪಿಗಳ ಬಗ್ಗೆ ಗೊತ್ತಾಗಿಲ್ಲ ಎಂದು ಸ್ಥಳಕ್ಕೆ ಭೇಟಿ ನೀಡಿದ ಸರ್ಕಲ್ ಇನ್ ಸ್ಪೆಕ್ಟರ್ ಮಹಾಂತೇಶ ಪಾಟೀಲ ತಿಳಿಸಿದ್ದಾರೆ.

ಮೃತ ವ್ಯಕ್ತಿಯ ಪುತ್ರ ಮಿಥುನ್ ನೀಡಿದ ದೂರಿನ ಮೇರೆಗೆ ಮಿರಿಯಾಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.