ಕಲಬುರ್ಗಿ: ಇಲ್ಲಿನ ಜಿಮ್ಸ್ ಆಸ್ಪತ್ರೆ ಆವರಣ ಹಂದಿಗಳ ತಾಣವಾಗಿರುವುದಕ್ಕೆ ಶಾಸಕ ಪ್ರಿಯಾಂಕ್ ಖರ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರೀಯ ಮಾಧ್ಯಮಗಳಲ್ಲಿ ಜಿಮ್ಸ್ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಈ ರೀತಿ ಕುಖ್ಯಾತಿಯಾಗಲು ಬಿಜೆಪಿ ಕಾರಣ ಎಂದು ವ್ಯಂಗ್ಯವಾಗಿ ಟೀಕಿಸಿದ್ದಾರೆ.
ಟ್ವೀಟ್ನಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಶಾಸಕರು, ‘ದೇಶದಲ್ಲಿಯೇ ಮೊದಲ ಕೋವಿಡ್ ಸಾವು ವರದಿಯಾಗಿರುವುದು ಕಲಬುರ್ಗಿಯಲ್ಲಿ. ಇಷ್ಟಾದರೂ ಆಸ್ಪತ್ರೆಗಳಲ್ಲಿ ಸ್ವಚ್ಛತೆಗೆ ಆದ್ಯತೆ ಕೊಡದೆ ನಾವೆಲ್ಲ ಯಾವ ಪಾಠ ಕಲಿತಿದ್ದೇವೆ? ಬೇರೆಯವರಿಗೆ ಏನು ಸಂದೇಶ ರವಾನಿಸಿದ್ದೇವೆ? ಯಾವ ನಿಗದಿತ ನಿಯಮಗಳು ಪಾಲನೆಯಾಗಿವೆ’ ಎಂದು ಪ್ರಶ್ನಿಸಿದ್ದಾರೆ.
‘ಬಿಜೆಪಿ ಸರ್ಕಾರ ಆರೋಗ್ಯ ಸೌಕರ್ಯಗಳನ್ನು ವೃದ್ಧಿಸುವ ಬದಲು ಲಾಭ ಮಾಡಿಕೊಳ್ಳುವುದರಲ್ಲಿ ತೊಡಗಿಕೊಂಡಿದೆ’ ಎಂದು ಪ್ರಿಯಾಂಕ್ ಆರೋಪಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.