ADVERTISEMENT

ತಲ್ವಾರ್‌ನಿಂದ ಹಲ್ಲೆ ಯತ್ನ: ಜನಸಂದಣಿ ನಡುವೆ ವ್ಯಕ್ತಿಗೆ ಪೊಲೀಸರಿಂದ ಫೈರಿಂಗ್

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2023, 1:59 IST
Last Updated 6 ಫೆಬ್ರುವರಿ 2023, 1:59 IST
   

ಕಲಬುರಗಿ: ನಗರದ ಸೂಪರ್ ಮಾರ್ಕೆಟ್‌ನಲ್ಲಿ ಭಾನುವಾರ ರಾತ್ರಿ ಮಾರಕಾಸ್ತ್ರ ಹಿಡಿದು ಜನರಿಗೆ ಹೆದರಿಸುತ್ತಿದ್ದ ವ್ಯಕ್ತಿಯ ಮೇಲೆ‌ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡು ತಗುಲಿ ಗಾಯಗೊಂಡ ಅಬ್ದುಲ್ ಜಾಫರ್ ಸಾಬ್ ಎಂಬಾತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸುಮಾರು ಒಂದು ಗಂಟೆ ಕಾಲ ಕೈಯಲ್ಲಿ ತಲ್ವಾರ್ ಹಿಡಿದು ರಸ್ತೆಯಲ್ಲಿ ತಿರುಗಾಡಿ ಜನರಲ್ಲಿ ಭೀತಿ ಸೃಷ್ಟಿಸುತ್ತಿದ್ದ ಅಬ್ದುಲ್ ಜಾಫರ್‌ ಸಾಬ್ ಮೇಲೆ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದರು.

ಶರಣಾಗುವಂತೆ ಸೂಚಿಸಿದ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾದ. ಹೀಗಾಗಿ, ಪಿಎಸ್‌ಐ ವಾಹಿದ್ ಕೊತ್ವಾಲ್ ಆರೋಪಿಯತ್ತ ಮೂರು ಸುತ್ತು ಗುಂಡು ಹಾರಿಸಿದರು. ಕೊನೆಯ ಗುಂಡು ಆತನ ಕಾಲಿಗೆ ಬಡಿದಿದ್ದರಿಂದ ಕೆಳಗೆ ಬಿದ್ದ. ನಂತರ ಆತನನ್ನು ಸುತ್ತುವರೆದು ಬಂಧಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.