ಕಲಬುರಗಿ: ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಣೆ ಮಾಡುತ್ತಿದ್ದ ₹35 ಲಕ್ಷ ನಗದನ್ನು ಸೇಡಂ ತಾಲ್ಲೂಕಿನ ರಿಬ್ಬನ್ಪಲ್ಲಿ ಚೆಕ್ ಪೋಸ್ಟ್ ಸಿಬ್ಬಂದಿ ಬುಧವಾರ ವಶಕ್ಕೆ ಪಡೆದಿದ್ದಾರೆ.
ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯ ಪಂಚರಾಲಾ ಗ್ರಾಮದ ನಿವಾಸಿಗಳಾದ ದೇವೇಂದ್ರ ರೆಡ್ಡಿ, ಮಲ್ಲೇಶ್ ಹಾಗೂ ದಯಾಕರ ರೆಡ್ಡಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಈ ಮೂವರು ಕಾರಿನಲ್ಲಿ ₹35 ಲಕ್ಷ ಇರಿಸಿಕೊಂಡು ತೆಲಂಗಾಣದಿಂದ ಕಲಬುರಗಿ ಜಿಲ್ಲೆಯತ್ತ ಬರುತ್ತಿದ್ದರು. ಅಂತರರಾಜ್ಯ ಚೆಕ್ ಪೋಸ್ಟ್ ಬಳಿ ವಾಹನ ತಪಾಸಣೆ ವೇಳೆ ಸಿಕ್ಕ ಹಣಕ್ಕೆ ಸೂಕ್ತ ದಾಖಲೆಗಳು ನೀಡದ ಕಾರಣ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ಕುರಿತು ಮುಧೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.