ADVERTISEMENT

ಕಲಬುರ್ಗಿಯಲ್ಲಿ ನಟ ಪುನೀತ್ ಅಭಿಮಾನಿಗಳಿಗೆ ಲಾಠಿ ರುಚಿ!

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2021, 5:40 IST
Last Updated 21 ಮಾರ್ಚ್ 2021, 5:40 IST
ಅಭಿಮಾನಿಗಳಿಗೆ ಲಾಠಿ ರುಚಿ
ಅಭಿಮಾನಿಗಳಿಗೆ ಲಾಠಿ ರುಚಿ   

ಕಲಬುರ್ಗಿ: ಯುವರತ್ನ ಚಲನಚಿತ್ರದ ಪ್ರಚಾರಕ್ಕಾಗಿ ನಗರದ ಶರಣಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲು ಬರುತ್ತಿರುವ ಚಿತ್ರ ನಟ ಪುನೀತ್ ರಾಜಕುಮಾರ್ ಅವರನ್ನು ಕಾಣಲು ಬಂದ ಅಭಿಮಾನಿಗಳಿಗೆ ಪೊಲೀಸರು ಲಾಠಿ ರುಚಿ ತೋರಿಸಿದರು.

ಶ್ರೀಮಠದ ಎದುರಿಗೆ ಇರುವ ರಸ್ತೆಯ ಪಕ್ಕದಲ್ಲಿ ನಿಂತಿರುವ ಯುವಕ-ಯುವತಿಯರಿಗೆ ಪೊಲೀಸರು ಲಾಠಿ ಬೀಸಿದರು. ಇದರಿಂದ ಅಲ್ಲಿದ್ದವರು ಕಂಗಾಲಾಗಿ ಓಡಿ ಹೋದರು.

ಚಿತ್ರದ ಪ್ರಚಾರಕ್ಕಾಗಿ ನಗರದ ಏಷಿಯನ್ ಮಾಲ್ ಬಳಿ ಶಾಮಿಯಾನ ಹಾಕಲಾಗಿತ್ತು. ಆದರೆ ಕೊರೊನಾ ಸೋಂಕು ಹರಡುತ್ತಿರುವುದರಿಂದ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ಕಾರ್ಯಕ್ರಮಕ್ಕೆ ಅನುಮತಿ ನೀಡಿಲ್ಲ.

ADVERTISEMENT

ಇದರಿಂದಾಗಿ ಚಿತ್ರನಟ ಪುನೀತ್ ರಾಜಕುಮಾರ್ ಹಾಗೂ ‌ಚಿತ್ರ ತಂಡ ದೇವಸ್ಥಾನಕ್ಕೆ ಭೇಟಿ ನೀಡಿ ಡಾ. ಶರಣಬಸವಪ್ಪ ಅಪ್ಪ ಅವರನ್ನು ಭೇಟಿ ‌ಮಾಡಿ ಆಶೀರ್ವಾದ ಪಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.