ಕಲಬುರ್ಗಿ: ತಾಲ್ಲೂಕಿನ ನಂದಿಕೂರ ಗ್ರಾಮದ ಬಳಿ ಇರುವ ಕೇಂದ್ರ ಕಾರಾಗೃಹದ ಕೈದಿಯನ್ನು ಕೃಷಿ ಕೆಲಸಕ್ಕೆ ಕಳುಹಿಸಿದ್ದಾಗ ಸೋಮವಾರ ಪರಾರಿಯಾಗಿದ್ದಾನೆ.
ಚಿಂಚೋಳಿ ತಾಲ್ಲೂಕಿನ ಗಡಿಲಿಂಗದಳ್ಳಿ ಗ್ರಾಮದ ರಮೇಶ ವಡ್ಡರ (30) ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ.
ಜೈಲಿನ ಹೊರಭಾಗದಲ್ಲಿರುವ ಜಮೀನಿನಲ್ಲಿ ತೊಗರಿ ರಾಶಿ ಮಾಡಲು ರಮೇಶನನ್ನು ಕಳಿಸಲಾಗಿತ್ತು. ಈ ಸಂದರ್ಭದಲ್ಲಿ ಬಹಿರ್ದೆಸೆಗೆ ಹೋಗಿ ಬರುತ್ತೇನೆ ಎಂದು ನೆಪ ಹೇಳಿ ತೆರಳಿದವನು ಎಷ್ಟೊತ್ತಾದರೂ ಬಂದಿಲ್ಲ. ಇದರಿಂದ ಅನುಮಾನಗೊಂಡ ಸಿಬ್ಬಂದಿ ಹುಡುಕಾಟ ನಡೆಸಿದಾಗ ತಪ್ಪಿಸಿಕೊಂಡಿರುವುದು ಗೊತ್ತಾಗಿದೆ.
ಈ ಸಂಬಂಧ ಪರಹತಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.