ADVERTISEMENT

ಮೋದಿ ನೇಣಿಗೇರಲು ಸಿದ್ಧವಾದರೆರಸ್ತೆ ಸಿದ್ಧಪಡಿಸಿ ಕೊಡುತ್ತೇವೆ: ಪ್ರಿಯಾಂಕ್ ಖರ್ಗೆ

​ಪ್ರಜಾವಾಣಿ ವಾರ್ತೆ
Published 13 ಮೇ 2019, 14:27 IST
Last Updated 13 ಮೇ 2019, 14:27 IST
ಪ್ರಿಯಾಂಕ್‌ ಖರ್ಗೆ
ಪ್ರಿಯಾಂಕ್‌ ಖರ್ಗೆ   

ಕಲಬುರ್ಗಿ: ‘ಪ್ರಧಾನಿ ನರೇಂದ್ರ ಮೋದಿ ನೇಣಿಗೇರಲು ಸಿದ್ಧವಾದರೆ ನಾವು ರಸ್ತೆ ಸಿದ್ಧಪಡಿಸಿ ಕೊಡುತ್ತೇವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನೋಟು ರದ್ದತಿಯಿಂದ ಎದುರಾಗಿದ್ದ ತೊಂದರೆ 50 ದಿನಗಳಲ್ಲಿ ಸರಿಯಾಗದಿದ್ದರೆ ನಡು ರಸ್ತೆಯಲ್ಲಿ ನೇಣು ಹಾಕಿ ಅಂತ ಮೋದಿ ಹೇಳಿದ್ದರು. ಈಗಲೂ ಜನರ ಸಮಸ್ಯೆ ಹಾಗೆಯೇ ಇದೆ. ಆದ್ದರಿಂದ ನಾವು ರಸ್ತೆ ಮಾಡಿಕೊಡಲು ಸಿದ್ಧರಿದ್ದೇವೆ. ನೇಣಿಗೇರಲು ಮೋದಿ ಬರುತ್ತಾರ’ ಎಂದು ಪ್ರಶ್ನಿಸಿದರು.

‘ಸಂಸದ ಮಲ್ಲಿಕಾರ್ಜುನ ಖರ್ಗೆ ಕ್ಷಮೆಗೆ ಆಗ್ರಹಿಸುವ ಮುನ್ನ ಮೋದಿ ಸೇರಿ ಬಿಜೆಪಿ ನಾಯಕರು ಸೋನಿಯಾಗಾಂಧಿ, ರಾಹುಲ್ ಗಾಂಧಿ ಹಾಗೂ ರಾಜೀವ್ ಗಾಂಧಿ ಅವರ ಬಗ್ಗೆ ಕೀಳಾಗಿ ಮಾತನಾಡಿರುವುದಕ್ಕೆ ಕ್ಷಮೆ ಕೇಳಬೇಕು. ಖರ್ಗೆ ಅವರ ಮೇಲೆ ದೂರು ದಾಖಲಿಸುವುದಾದರೆ ದಯವಿಟ್ಟು ಮೊದಲು ದಾಖಲಿಸಿ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.