ADVERTISEMENT

ವಕ್ಫ್ ಮಂಡಳಿ ವಿರುದ್ಧ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2024, 5:09 IST
Last Updated 27 ಸೆಪ್ಟೆಂಬರ್ 2024, 5:09 IST
ಕಲಬುರಗಿಯ ವಕ್ಫ್ ಕಚೇರಿ ಮುಂಭಾಗದಲ್ಲಿ ಗುರುವಾರ ಜನತಾ ಪರಿವಾರ ಸಂಘಟನೆ ಮುಖಂಡರು ಪ್ರತಿಭಟನೆ ನಡೆಸಿದರು
ಕಲಬುರಗಿಯ ವಕ್ಫ್ ಕಚೇರಿ ಮುಂಭಾಗದಲ್ಲಿ ಗುರುವಾರ ಜನತಾ ಪರಿವಾರ ಸಂಘಟನೆ ಮುಖಂಡರು ಪ್ರತಿಭಟನೆ ನಡೆಸಿದರು   

ಕಲಬುರಗಿ: ಜಿಲ್ಲಾ ವಕ್ಫ್‌ ಮಂಡಳಿಯ ಅಧಿಕಾರಿಗಳು ಮುಸ್ಲಿಂ ಸಮುದಾಯದವರಿಗೆ ಸೌಕರ್ಯಗಳನ್ನು ಒದಗಿಸುವ ಬದಲು ರಾಜಕೀಯ ನಾಯಕರು, ವಾಣಿಜ್ಯ ಉದ್ಯಮಿಗಳಿಗೆ ಬೆಂಬಲ ಕೊಡುತ್ತಿದ್ದಾರೆ ಎಂದು ಆರೋಪಿಸಿ ಜನತಾ ಪರಿವಾರ ಸಂಘಟನೆ ಮುಖಂಡರು ವಕ್ಫ್ ಕಚೇರಿ ಮುಂಭಾಗದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ವಕ್ಫ್ ಮಂಡಳಿಯ ಸದಸ್ಯರ ನೇಮಕ ಹಾಗೂ ಪರಿಹಾರಕ್ಕಾಗಿ ನಿಯಂತ್ರಕ ಸಮಿತಿಗಳನ್ನು ರಚಿಸಬೇಕು. ಪ್ರತಿಯೊಂದು ಪ್ರದೇಶದಲ್ಲಿ ಮಸೀದಿಯ ಸಮಿತಿಯು ಮೇಲ್ವಿಚಾರಣೆ ಮಾಡಬೇಕು ಎಂದು ಕೋರಿದ್ದಾರೆ.

ಪ್ರತಿಭಟನೆಯಲ್ಲಿ ಮುಖಂರಾದ ಸಿರಾಜ್ ಶಬ್ದಾ, ಶೇಖ್ ಸೈಫಾನ್, ಅಬ್ದುಲ್ ಹುಸೇನ್, ಅಬ್ದುಲ್ ಸಬೀರ್ ಸೇರಿ ಹಲವರು ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.