ಕಲಬುರಗಿ: ಈಶ್ವರಚಂದ್ರ ವಿದ್ಯಾಸಾಗರ ಅವರ ಸ್ಮರಣ ದಿನದ ಅಂಗವಾಗಿ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ (ಎಐಎಸ್ಇಸಿ) ವತಿಯಿಂದ ಸಾರ್ವಜನಿಕ ಶಿಕ್ಷಣ ಉಳಿಸಿ ದಿನ ಆಚರಿಸಲಾಯಿತು.
ಇದೇ ವೇಳೆ ನೂತನ ಶಿಕ್ಷಣ ನೀತಿ ವಿರೋಧಿಸಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜಿಲ್ಲಾ ಸಮಿತಿ ಕಾರ್ಯದರ್ಶಿ ರಾಮಣ್ಣ ಎಸ್.ಇಬ್ರಾಹಿಂಪುರ ಮಾತನಾಡಿ, ‘ನೂತನ ಶಿಕ್ಷಣ ನೀತಿ ಜನವಿರೋಧಿಯಾಗಿದೆ. ಇದರಹಿಂದೆಶಿಕ್ಷಣಕ್ಷೇತ್ರವನ್ನು ಹಾಳುಮಾ ಡುವಹುನ್ನಾರ ಅಡಗಿದೆ. ಬಂಡವಾಳಶಾಹಿಗಳ ಸೇವೆಗಾಗಿ ವಿದ್ಯಾರ್ಥಿಗಳನ್ನು ಬಲಿಪಶು ಮಾಡಲಾಗುತ್ತಿದೆ’ ಎಂದು ಆರೋಪಿಸಿದರು.
ಶಿಕ್ಷಣ ನೀತಿಗಳು ಎಲ್ಲರಿಗೂ ಶಿಕ್ಷಣ ದೊರಕಿಸುವ ಉದ್ದೇಶ ಹೊಂದಿರಬೇಕು. ಆದರೆ ನೂತನ ನೀತಿ ಬಡವರಿಗೆ ಶಿಕ್ಷಣ ಕ್ಷೇತ್ರದ ಬಾಗಿಲುಗಳನ್ನು ಮುಚ್ಚುತ್ತದೆ. ಚರ್ಚೆ ಇಲ್ಲ ದೆ ಕಾಯ್ದೆಗಳನ್ನು ಜಾರಿಗೆ ತಂದರೆ ಇಂಥ ಅಪಾಯ ಆಗುವ ಸಾಧ್ಯತೆ ಇರುತ್ತದೆ. ಈ ಹುನ್ನಾರದ ವಿರುದ್ಧ ಎಲ್ಲರೂ ಒಗ್ಗೂಡಬೇಕು. ಪ್ರತಿಭಟಿಸಬೇಕು ಎಂದು ಹೇಳಿದರು.
ಜಿಲ್ಲಾ ಸಮಿತಿ ಸದಸ್ಯರಾದ ವಿಶಾಲಾಕ್ಷಿ ಪಾಟೀಲ, ಜಾನಕಿ ಎಸ್.ಗುದ್ದಿ, ಶಿವಕುಮಾರ ಕುಸಾಳೆ ಹಾಗೂ ವಿಜಯಾ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.