ADVERTISEMENT

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲು ಒತ್ತಾಯ

ಆನೆಗೊಂದಿ ವ್ಯಾಜಸರಾಜತೀರ್ಥರ ವೃಂದಾವನ ಧ್ವಂಸ ಪ್ರಕರಣ

​ಪ್ರಜಾವಾಣಿ ವಾರ್ತೆ
Published 19 ಜುಲೈ 2019, 15:00 IST
Last Updated 19 ಜುಲೈ 2019, 15:00 IST
ಕೊಪ್ಪಳ ಜಿಲ್ಲೆ ಆನೆಗೊಂದಿಯಲ್ಲಿ ವ್ಯಾಸರಾಜತೀರ್ಥರ ನವವೃಂದಾವನ ಧ್ವಂಸ ಘಟನೆ ಖಂಡಿಸಿ ಪೇಜಾವರಶ್ರೀ ಸೇನೆ ಹಾಗೂ ಶ್ರೀರಾಮಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು
ಕೊಪ್ಪಳ ಜಿಲ್ಲೆ ಆನೆಗೊಂದಿಯಲ್ಲಿ ವ್ಯಾಸರಾಜತೀರ್ಥರ ನವವೃಂದಾವನ ಧ್ವಂಸ ಘಟನೆ ಖಂಡಿಸಿ ಪೇಜಾವರಶ್ರೀ ಸೇನೆ ಹಾಗೂ ಶ್ರೀರಾಮಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು   

ಕಲಬುರ್ಗಿ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಆನೆಗೊಂದಿಯಲ್ಲಿರುವ ವ್ಯಾಸರಾಜ ತೀರ್ಥರ ನವವೃಂದಾವನವನ್ನು ಧ್ವಂಸಗೊಳಿಸಿದ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಪೇಜಾವರಶ್ರೀ ಸೇನೆ ಹಾಗೂ ಶ್ರೀರಾಮಸೇನೆ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ವಿಜಯನಗರ ಸಾಮ್ರಾಜ್ಯದ ಚಕ್ರಾಧಿಪತಿ ಶ್ರೀಕೃಷ್ಣದೇವರಾಯನಿಗೆ ಸಂಕಟ ಎದುರಾದಾಗ ಅದರಿಂದ ಮುಕ್ತವಾಗುವ ಸಲುವಾಗಿ ಕೃಷ್ಣದೇವರಾಯ ವ್ಯಾಸರಾಜರನ್ನು ಸಿಂಹಾಸನದಲ್ಲಿ ಕುಳ್ಳಿರಿಸಿದ ಶ್ರೇಷ್ಠ ಪರಂಪರೆ ನವವೃಂದಾವನಕ್ಕಿದೆ. ದುಷ್ಕರ್ಮಿಗಳು ದುರಾಸೆ ಮತ್ತು ಧನದಾಹದಿಂದ ನಿಧಿಗಾಗಿ ನವವೃಂದಾವನವನ್ನು ಧ್ವಂಸಗೊಳಿಸಿದ್ದಾರೆ. ಕೂಡಲೇ ತಪ್ಪಿತಸ್ಥರನ್ನು ಪತ್ತೆಹಚ್ಚದಿದ್ದರೆ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ADVERTISEMENT

ಪೇಜಾವರಶ್ರೀ ಸೇನೆ ಅಧ್ಯಕ್ಷ ಎಂ.ಎಸ್‌.ಪಾಟೀಲ ನರಿಬೋಳ, ಮಹಿಳಾ ಘಟಕದ ಅಧ್ಯಕ್ಷೆ ದಿವ್ಯಾ ಆರ್‌. ಹಾಗರಗಿ, ಶ್ರೀರಾಮಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಲಕ್ಷ್ಮಿಕಾಂತ ಸ್ವಾದಿ, ಮುಖಂಡರಾದ ರಮೇಶ ಕುಲಕರ್ಣಿ, ಶ್ವೇತಾ ಸಿಂಗ್‌, ವೀರೇಂದ್ರ ಮಂಠಾಳೆ, ಗುರುರಾಜ ಕುಲಕರ್ಣಿ, ರಾಜೇಶ ಹಾಗರಗಿ, ಬಾಬುರಾವ್‌ ಬಸಂತವಾಡಿ, ಶರಣಗೌಡ ಪಾಟೀಲ ಹರಸೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.