ADVERTISEMENT

ಪಿಎಸ್ಐ ಅಕ್ರಮ ನೇಮಕಾತಿ; ಶಾಸಕರ ಗನ್ ಮ್ಯಾನ್ ಸೇರಿ ಮತ್ತೆ ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2022, 10:04 IST
Last Updated 21 ಏಪ್ರಿಲ್ 2022, 10:04 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕಲಬುರಗಿ: ಪಿಎಸ್ಐ ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಅಫಜಲಪುರ ಶಾಸಕ ಎಂ.ವೈ.ಪಾಟೀಲ ಅವರ ಗನ್ ಮ್ಯಾನ್ ಹಯ್ಯಾಳಿ ದೇಸಾಯಿ ಹಾಗೂ ಸಿಎಆರ್ ಪೊಲೀಸ್ ಕಾನ್ ಸ್ಟೆಬಲ್ ರುದ್ರಗೌಡ ಪಾಟೀಲ ಎಂಬುವವರನ್ನು ಗುರುವಾರ ಬಂಧಿಸಿದ್ದಾರೆ.

ಇದರೊಂದಿಗೆ ಬಂಧಿತರ ಸಂಖ್ಯೆ ಒಂಬತ್ತಕ್ಕೆ ಏರಿದೆ. ಈಗಾಗಲೇ ಕಲಬುರಗಿಯ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಮೂವರು ಪರೀಕ್ಷಾ ‌ಮೇಲ್ವಿಚಾರಕಿಯರು, ಮೂವರು ಅಭ್ಯರ್ಥಿಗಳು ಹಾಗೂ ಶಾಲೆಯ ಮುಖ್ಯಸ್ಥೆ ದಿವ್ಯಾ ಹಾಗರಗಿ ಪತಿ ರಾಜೇಶ್ ಹಾಗರಗಿಯನ್ನು ಬಂಧಿಸಿದ್ದಾರೆ.

ಶಾಸಕರೊಂದಿಗೆ ಕಾರಿನಲ್ಲಿ ನಗರದ ರಾಮಮಂದಿರ ಬಳಿ ಹೊರಟಿದ್ದಾಗ ಸಿಐಡಿ ಪೊಲೀಸರು ಗನ್ ಮ್ಯಾನ್ ಹಯ್ಯಾಳಿಯನ್ನು ವಶಕ್ಕೆ ಪಡೆದರು‌.

ADVERTISEMENT

ಬಂಧಿತ ಗನ್ ಮ್ಯಾನ್ ಹಯ್ಯಾಳಿ (ಅಯ್ಯಣ್ಣ) ದೇಸಾಯಿ ಪಿಎಸ್ಐ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಆಯ್ಕೆಯಾಗಿದ್ದ ಎಂದು ತಿಳಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.