ADVERTISEMENT

ಪಿಎಸ್ಐ ಹಗರಣ: ಕೆಎಸ್‌ಆರ್‌ಪಿ ಡಿವೈಎಸ್ಪಿ ವೈಜನಾಥ ಸಿಐಡಿ ವಶಕ್ಕೆ 

​ಪ್ರಜಾವಾಣಿ ವಾರ್ತೆ
Published 6 ಮೇ 2022, 14:19 IST
Last Updated 6 ಮೇ 2022, 14:19 IST
   

ಕಲಬುರಗಿ: ಪಿಎಸ್‌ಐಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ (ಕೆಎಸ್‌ಆರ್‌ಪಿ)ಕಲಬುರಗಿ ವಿಭಾಗದ ಡಿವೈಎಸ್ಪಿ ವೈಜನಾಥ ಅವರನ್ನು ಶುಕ್ರವಾರ ‌ಸಂಜೆ ವಶಕ್ಕೆ ‌ಪಡೆದರು.

ವೈಜನಾಥ ಸಹ ಹಲವು ವರ್ಷಗಳಿಂದ ಅಕ್ರಮ ನೇಮಕಾತಿ ಮಾಡಿಸುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ಕೆಎಸ್‌ಆರ್‌ಪಿಯ ನಾಲ್ಕನೇ ಪ್ರಶಿಕ್ಷಣಾರ್ಥಿಗಳ ತಂಡದ ನಿರ್ಗಮನ ಪಥಸಂಚಲನದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಅವರು ಭಾಗವಹಿಸಿ ತೆರಳಿದ ಬೆನ್ನಲ್ಲೇ ಕೆಎಸ್‌ಆರ್‌ಪಿಯ ಹಿರಿಯ ಅಧಿಕಾರಿಯ ಬಂಧನವಾಗಿದೆ.

ADVERTISEMENT

ವೈಜನಾಥ ಮೂಲತಃ ಅಫಜಲಪುರ ತಾಲ್ಲೂಕಿನ ಮಾಶಾಳ ಗ್ರಾಮದವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.