ADVERTISEMENT

ಪಿಎಸ್‌ಐ  ನೇಮಕಾತಿ  ಅಕ್ರಮ| ಜ್ಯೋತಿ ಪಾಟೀಲ ಜಾಮೀನು ಅರ್ಜಿ ತಿರಸ್ಕೃತ

​ಪ್ರಜಾವಾಣಿ ವಾರ್ತೆ
Published 21 ಜೂನ್ 2022, 18:25 IST
Last Updated 21 ಜೂನ್ 2022, 18:25 IST
   

ಕಲಬುರಗಿ: ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಮಧ್ಯವರ್ತಿಯಾಗಿ ಕೆಲಸ ಮಾಡಿದ ಆರೋಪದ ಮೇರೆಗೆ ನ್ಯಾಯಾಂಗ ಬಂಧನದಲ್ಲಿರುವ ಜ್ಯೋತಿ ಪಾಟೀಲ ಜಾಮೀನು ಅರ್ಜಿಯನ್ನು ಇಲ್ಲಿನ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾ ಮಾಡಿದೆ.

ಶಹಾಬಾದ್ ನಗರಸಭೆಯಲ್ಲಿ ದ್ವಿತೀಯ ದರ್ಜೆ ಸಹಾಯಕಿಯಾಗಿದ್ದ ಜ್ಯೋತಿ ಪಾಟೀಲ ಅಭ್ಯರ್ಥಿ ಶಾಂತಿಬಾಯಿಗೆ ಪರೀಕ್ಷೆಯಲ್ಲಿ ಪಾಸು ಮಾಡಿಸುವ ನಿಟ್ಟಿನಲ್ಲಿ ಪ್ರಕರಣದ ಕಿಂಗ್‌ಪಿನ್ ಮಂಜುನಾಥ ಮೇಳಕುಂದಿ ಯನ್ನು ಭೇಟಿ ಮಾಡಿಸಿದ್ದರು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಪರಾರಿಯಾಗಿದ್ದ ಜ್ಯೋತಿ ಪಾಟೀಲ ಅವರನ್ನು ಮಾರ್ಚ್ 31ರಂದು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT