ADVERTISEMENT

ಪರಿಶಿಷ್ಟರ ಮನೆಯಲ್ಲಿ ಸಚಿವ ಆರ್. ಅಶೋಕ ಊಟ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2022, 5:59 IST
Last Updated 21 ಆಗಸ್ಟ್ 2022, 5:59 IST
ದಶರಥ ರಾಠೋಡ ಅವರ ಮನೆಯಲ್ಲಿ ಊಟ ಮಾಡಿದ ಕಂದಾಯ ಸಚಿವ ಆರ್. ಅಶೋಕ
ದಶರಥ ರಾಠೋಡ ಅವರ ಮನೆಯಲ್ಲಿ ಊಟ ಮಾಡಿದ ಕಂದಾಯ ಸಚಿವ ಆರ್. ಅಶೋಕ   

ಕಲಬುರಗಿ: ಗ್ರಾಮ ವಾಸ್ತವ್ಯಕ್ಕಾಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಆಡಕಿ ಗ್ರಾಮಕ್ಕೆ ಶನಿವಾರ ಬಂದಿರುವ ಕಂದಾಯ ಸಚಿವ ಆರ್. ಅಶೋಕ ಅವರು ಭಾನುವಾರ ಬೆಳಿಗ್ಗೆ ಗ್ರಾಮದ ಪರಿಶಿಷ್ಟ ಸಮುದಾಯದ ದಶರಥ ರಾಠೋಡ ಅವರ ಮನೆಯಲ್ಲಿ ಊಟ ಮಾಡಿದರು.

ಸ್ಥಳೀಯ ಶಾಸಕರೂ ಆದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜಕುಮಾರ ಪಾಟೀಲ ತೇಲ್ಕೂರ, ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮೂಡ, ಜಿಲ್ಲಾಧಿಕಾರಿ
ಯಶವಂತ ವಿ. ಗುರುಕರ್ ಜೊತೆ ಜೋಳದ ರೊಟ್ಟಿ‌ ಊಟ ಸವಿದರು.

ದಶರಥ ರಾಠೋಡ ಮತ್ತು ವಿಮಲಾಬಾಯಿ ರಾಠೋಡ ಸಚಿವರಿಗೆ ಊಟ ಬಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.