ADVERTISEMENT

ರಾಮನವಮಿ ಶೋಭಾಯಾತ್ರೆ: ಆಳಂದ ತಾಲ್ಲೂಕಿನಾದ್ಯಂತ ಮದ್ಯ ಮಾರಾಟ ನಿಷೇಧ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2022, 9:54 IST
Last Updated 23 ಏಪ್ರಿಲ್ 2022, 9:54 IST

ಕಲಬುರಗಿ: ಶ್ರೀರಾಮ‌‌ ಸೇನೆ ಸಂಘಟನೆಯಿಂದ ರಾಮನವಮಿ ಅಂಗವಾಗಿ ಏ.24 ರಂದು ಆಳಂದ ಪಟ್ಟಣದಲ್ಲಿ ಶೋಭಾಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ, ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡಲು‌ ಆಳಂದ ತಾಲ್ಲೂಕಿನಾದ್ಯಂತ ಏ.23ರ ಸಾಯಂಕಾಲ 6 ರಿಂದ ಏ.25ರ ಬೆಳಿಗ್ಗೆ 6 ಗಂಟೆ ವರೆಗೆ ಎಲ್ಲಾ ತರಹದ ಮದ್ಯಪಾನ, ಸಾರಾಯಿ, ಶೇಂದಿ, ಸ್ವದೇಶಿ ಹಾಗೂ ವಿದೇಶಿ ಮದ್ಯಪಾನ ಹಾಗೂ ಮಾದಕ ವಸ್ತುಗಳ ಮಾರಾಟ ಮಾಡುವುದನ್ನು ನಿಷೇಧಿಸಿ‌ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಆದೇಶಿಸಿದ್ದಾರೆ.

ಅಲ್ಲದೆ ಈ ಅವಧಿಯಲ್ಲಿ ತಾಲ್ಲೂಕಿನ‌ ಎಲ್ಲ ಬಾರ್ ಮತ್ತು ರೆಸ್ಟೋರೆಂಟ್ ಗಳನ್ನು ಸಹ ಮುಚ್ಚುವಂತೆ ಆದೇಶಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT