ADVERTISEMENT

ಪುನೀತ್ ರಾಜ್‌ಕುಮಾರ್‌ ಪುಣ್ಯಸ್ಮರಣೆ | ಪುನೀತ್‌ ವಿಚಾರಗಳು ಅಜರಾಮರ: ವಿಜಯಕುಮಾರ

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2023, 16:47 IST
Last Updated 29 ಅಕ್ಟೋಬರ್ 2023, 16:47 IST
<div class="paragraphs"><p>ಕಲಬುರಗಿಯ ನಗರದ ಕನ್ನಡ ಭವನದಲ್ಲಿ ಭಾನುವಾರ ಕಸಾಪ ಜಿಲ್ಲಾ ಘಟಕದಿಂದ ಆಯೋಜಿಸಿದ್ದ ಪುನೀತ್ ರಾಜ್‌ಕುಮಾರ್‌ ಅವರ ಪುಣ್ಯಸ್ಮರಣೆ ಆಚರಿಸಲಾಯಿತು</p></div>

ಕಲಬುರಗಿಯ ನಗರದ ಕನ್ನಡ ಭವನದಲ್ಲಿ ಭಾನುವಾರ ಕಸಾಪ ಜಿಲ್ಲಾ ಘಟಕದಿಂದ ಆಯೋಜಿಸಿದ್ದ ಪುನೀತ್ ರಾಜ್‌ಕುಮಾರ್‌ ಅವರ ಪುಣ್ಯಸ್ಮರಣೆ ಆಚರಿಸಲಾಯಿತು

   

ಕಲಬುರಗಿ: ‘ಕರ್ನಾಟಕದ ಕನ್ನಡಿಗರ ಪ್ರೀತಿಯ ಅಪ್ಪು (ಪುನೀತ್ ರಾಜ್‌ಕುಮಾರ್‌) ದೈಹಿಕವಾಗಿ ನಮ್ಮೊಂದಿಗೆ ಇಲ್ಲದಿರಬಹುದು. ಆದರೆ, ಅವರ ವಿಚಾರಗಳು ಮಾತ್ರ ಅಜರಾಮರವಾಗಿವೆ’ ಎಂದು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.

ನಗರದ ಕನ್ನಡ ಭವನದಲ್ಲಿ ಭಾನುವಾರ ಕಸಾಪ ಜಿಲ್ಲಾ ಘಟಕದಿಂದ ಆಯೋಜಿಸಿದ್ದ ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್‌ ಅವರ ದ್ವಿತೀಯ ಪುಣ್ಯಸ್ಮರಣೋತ್ಸವದಲ್ಲಿ ಅವರು ಮಾತನಾಡಿದರು.

ADVERTISEMENT

‘ಪುನೀತ್‌ ಅನೇಕ ಸಾಮಾಜಿಕ ಕಾರ್ಯಗಳು ಮಾಡುವ ಜೊತೆಗೆ ನಾಡಿನ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡಿದ್ದರು. ಅವರ ಈ ಕಾರ್ಯ ಮಾನವೀಯ ಪ್ರಜ್ಞೆಗೆ ನಿದರ್ಶನ’ ಎಂದರು.

ಕಸಾಪ ಜೇವರ್ಗಿ ತಾಲ್ಲೂಕು ಘಟಕದ ಅಧ್ಯಕ್ಷ ಎಸ್‌.ಕೆ.ಬಿರಾದಾರ ಮಾತನಾಡಿದರು. ಕಸಾಪ ಜಿಲ್ಲಾ ಕೋಶಾಧ್ಯಕ್ಷ ಶರಣರಾಜ್ ಛಪ್ಪರಬಂದಿ, ಸಂಘಟನಾ ಕಾರ್ಯದರ್ಶಿ ರವೀಂದ್ರಕುಮಾರ ಭಂಟನಳ್ಳಿ, ಸಹ ಕಾರ್ಯದರ್ಶಿಗಳಾದ ರಾಜೇಂದ್ರ ಮಾಡಬೂಳ, ವಿಶ್ವನಾಥ ತೊಟ್ನಳ್ಳಿ, ಕಸಾಪ ದಕ್ಷಿಣ ವಲಯದ ಅಧ್ಯಕ್ಷ ಶಾಮಸುಂದರ ಕುಲಕರ್ಣಿ, ಪ್ರಮುಖರಾದ ಮಹೇಶ ಚಿಂತನಪಳ್ಳಿ, ಮಂಜುನಾಥ ಕಂಬಾಳಿಮಠ, ಶರಣಮ್ಮ ಹಿರೇಮಠ, ಶ್ರೀದೇವಿ ಕೋರೆ, ಎಚ್.ಎಸ್.ಬರಗಾಲಿ, ನಾಗನ್ನಾಥ ಯಳಸಂಗಿ, ಸುಧಾಕರ ಮಾಡಿಯಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.