ADVERTISEMENT

ಕೋವಿಡ್‌ನಿಂದ ನಿವೃತ್ತ ಪ್ರಾಧ್ಯಾಪಕ ಸಾವು

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2021, 2:49 IST
Last Updated 20 ಏಪ್ರಿಲ್ 2021, 2:49 IST
ರಾಜೇಂದ್ರ ಸಿಂಗ್
ರಾಜೇಂದ್ರ ಸಿಂಗ್   

ಕಲಬುರ್ಗಿ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ (ಸ್ವಾಯತ್ತ) ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಹುದ್ದೆಯಿಂದ ಮಾರ್ಚ್ 31ರಂದು ನಿವೃತ್ತಿಯಾಗಿದ್ದ ಡಾ. ರಾಜೇಂದ್ರ ಸಿಂಗ್ ಬಯಾಸ್ (60) ಕೋವಿಡ್‌ನಿಂದಾಗಿ ಮೃತಪಟ್ಟಿದ್ದಾರೆ.

ಕೆಲ ದಿನಗಳಿಂದ ಕೋವಿಡ್‌ ದೃಢಪಟ್ಟಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಬೆಳಿಗ್ಗೆ ಮೃತಪಟ್ಟರು.

ಅವರಿಗೆ ತಾಯಿ, ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ.

ADVERTISEMENT

ಸಿಂಗ್ ಅವರು ಸಂಗೀತಗಾರರಾಗಿ, ವಿದ್ಯಾರ್ಥಿಗಳ ನೆಚ್ಚಿನ ಪ್ರಾಧ್ಯಾಪಕರಾಗಿ ಗುರುತಿಸಿಕೊಂಡಿದ್ದರು. ತಮ್ಮ ನೆಚ್ಚಿನ ಪ್ರಾಧ್ಯಾಪಕರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಹಲವು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳೊಂದಿಗೆ ಅವರೊಂದಿಗಿನ ಒಡನಾಟವನ್ನು ಹಂಚಿಕೊಂಡು ಕಂಬನಿ ಮಿಡಿದರು.

ಅಂತ್ಯಕ್ರಿಯೆ ಕೋವಿಡ್ ನಿಯಮಗಳ ಪ್ರಕಾರ ಜೇವರ್ಗಿ ಕಾಲೊನಿಯ ಚಿತ್ತಾರಿ ರುದ್ರಭೂಮಿಯಲ್ಲಿ ಬೆಳಿಗ್ಗೆ ನೆರವೇರಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.