ADVERTISEMENT

ಎತ್ತಿನಗಾಡಿ–ಬೈಕ್‌ ಮಧ್ಯೆ ಡಿಕ್ಕಿ: ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2019, 9:59 IST
Last Updated 7 ಡಿಸೆಂಬರ್ 2019, 9:59 IST
ರಸ್ತೆ ಅಪಘಾತದಲ್ಲಿ ನಜ್ಜುಗುಜ್ಜಾದ ಬೈಕ್‌
ರಸ್ತೆ ಅಪಘಾತದಲ್ಲಿ ನಜ್ಜುಗುಜ್ಜಾದ ಬೈಕ್‌   

ಅಫಜಲಪುರ: ಎತ್ತಿನಗಾಡಿ–ಬೈಕ್‌ ಮಧ್ಯೆ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಅಫಜಲಪುರ ತಾಲ್ಲೂಕಿನ ಬಂಕಲಗಾ ಗ್ರಾಮದ ಪುಂಡಲೀಕ ಶರಣಪ್ಪ (28) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಲಬುರ್ಗಿಯಿಂದ ಅಫಜಲಪುರದತ್ತ ತೆರಳುವ ವೇಳೆ ಹಿಂದಿನಿಂದ ರಭಸದಿಂದ ಡಿಕ್ಕಿ ಹೊಡೆದಿದ್ದರಿಂದ ಸ್ಥಳದಲ್ಲೇ ಮೃತಪಟ್ಟರು.

ಬೈಕ್‌ ಸವಾರಿ ಮಾಡುವ ವೇಳೆ ಹೆಲ್ಮೆಟ್‌ ಹಾಕಿದ್ದರು. ಆದರೆ, ಡಿಕ್ಕಿ ಹೊಡೆದ ರಭಸಕ್ಕೆ ಹೆಲ್ಮೆಟ್‌ ರಸ್ತೆ ಮೇಲೆ ಬಿದ್ದಿದೆ. ಹೀಗಾಗಿ, ರಸ್ತೆಗೆ ತಲೆ ಜೋರಾಗಿ ಬಡಿದಿದ್ದರಿಂದ ತೀವ್ರ ರಕ್ತಸ್ರಾವವಾಗಿ ಸಾವಿಗೀಡಾಗಿದರು ಎಂದು ಪ್ರಕರಣ ದಾಖಲಿಸಿಕೊಂಡ ಅಫಜಲಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT