ADVERTISEMENT

ರಾವೂರ ಬಳಿ ಭೀಕರ ಅಪಘಾತ: ಮೂವರು ಸಾವು

​ಪ್ರಜಾವಾಣಿ ವಾರ್ತೆ
Published 11 ಜನವರಿ 2021, 6:24 IST
Last Updated 11 ಜನವರಿ 2021, 6:24 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಕಲಬುರ್ಗಿ: ಜಿಲ್ಲೆಯ ‌ಚಿತ್ತಾಪುರ‌ ತಾಲ್ಲೂಕು ವಾಡಿ ಬಳಿಯ ರಾವೂರ ಗ್ರಾಮದ ಹೊರವಲಯದಲ್ಲಿ ಸೋಮವಾರ ನಸುಕಿನ ಜಾವ ‌ಸಂಭವಿಸಿದ ರಸ್ತೆ ಅಪಘಾತದಲ್ಲಿ ‌ಮೂವರು ಸಾವಿಗೀಡಾಗಿದ್ದಾರೆ.

ಸುಣ್ಣದ ಭಟ್ಟಿ ಬಳಿಯ ಮಾಣಿಕ ಗುದ್ಗಲ್ ಅವರ ಜಮೀನಿನ ಬಳಿ ಸಂಭವಿಸಿದ ಅಪಘಾತದಲ್ಲಿ
ರಾವೂರು ನಿವಾಸಿಗಳಾದ ಭೀಮಾಶಂಕರ ಸುಭಾಷ ಪ್ಯಾಟಿ, ಅಕ್ಬರ್ ಗೂಡು ಪಟೇಲ್ ಹಾಗೂ ಮತ್ತೊರ್ವ ಯುವತಿ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ, ಡಿವೈಎಸ್ಪಿ ಕೃಷ್ಣಪ್ಪ ಕಲ್ಲೆದೇವರು ಭೇಟಿ ನೀಡಿ ಪರಿಶೀಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.