ಕಲಬುರ್ಗಿ: 32ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸದ ಅಂಗವಾಗಿ ನಗರ ಹೊರವಲಯದ ಸೇಡಂ ರಸ್ತೆಯಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಕಲಬುರ್ಗಿ ಸಾರಿಗೆ ಇಲಾಖೆಯ ಹಿರಿಯ ಸಾರಿಗೆ ಅಧಿಕಾರಿ ಇಕ್ರಮ್ ಪಾಶಾ ಮಾತನಾಡಿ, ‘ರಸ್ತೆ ಸುರಕ್ಷತಾ ನಿಯಮಗಳನ್ನು ಎಲ್ಲರೂ ಪಾಲಿಸಬೇಕು. ಜೀವಕ್ಕಿಂತ ದೊಡ್ಡದು ಯಾವುದೂ ಇಲ್ಲ. ನಿಮ್ಮ ಜೀವವನ್ನು ಉಳಿಸಿಕೊಳ್ಳುವುದರ ಜೊತೆಗೆ ಬೇರೆಯವರ ಜೀವನ ಉಳಿಸಬೇಕು. ಅದಕ್ಕಾಗಿ ಎಲ್ಲರೂ ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು’ ಅಂತ ಇಕ್ರಮ್ ಪಾಶಾ ತಿಳಿಸಿದರು.
ಕಾರ್ಯಕ್ರಮದಲ್ಲಿ ಚಾಲಕರು ಭಾಗಿಯಾಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.