ಕಲಬುರಗಿ: ಯೂತ್ ಫಾರ್ ಸೇವಾ ಸಂಸ್ಥೆಯ ವತಿಯಿಂದಧುತ್ತರಗಾಂವ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಮತ್ತು ಕಿರಿಯ ಪ್ರಾಥಮಿಕ ಶಾಲೆಯ 254 ಮಕ್ಕಳಿಗೆ ಸ್ಕೂಲ್ ಬ್ಯಾಗ್ ವಿತರಿಸಲಾಯಿತು.
ಸಂಸ್ಥೆಯ ಸ್ವಯಂ ಸೇವಕ ಮಲ್ಲಿನಾಥ ಕಟೇಕರ್, ಅಜೀಂ ಪ್ರೇಮ್ಜಿ ಪ್ರತಿಷ್ಠಾನದ ಸಂಪನ್ಮೂಲ ಅಧಿಕಾರಿ ಗುಂಡಪ್ಪ ಎಸ್. ಕಟೇಕರ್, ಸಿ.ಆರ್.ಪಿ ರಮೇಶ್ ದೊಡ್ಡಮನಿ, ಊರಿನ ಹಿರಿಯರಾದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವೀರಣ್ಣ ಮಂಗಾಣಿ, ಮುಖ್ಯ ಶಿಕ್ಷಕರು, ಸಿಬ್ಬಂದಿ ವರ್ಗ ಮತ್ತು ಹಳೆಯ ವಿದ್ಯಾರ್ಥಿಗಳಾದ ಗುರಣ್ಣ ಮೇತ್ರಿ, ಶಿವಶರಣ ಯಳಸಂಗಿ, ಎಸ್.ಡಿ.ಎಂ.ಸಿ. ಪದಾಧಿಕಾರಿಗಳು ಇದ್ದರು.
ಕಾರ್ಯಕ್ರಮವನ್ನು ಶಿವಶಂಕರ ಹಡಪದ ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.