ಕಲಬುರ್ಗಿ: ಇಲ್ಲಿನ ಚೆನ್ನವೀರ ನಗರದಲ್ಲಿರುವ ಅಯ್ಯಪ್ಪ ಶಾಲೆಯ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 10ಕ್ಕೂ ಅಧಿಕ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಇಲ್ಲಿನ ನ್ಯೂ ಜೇವರ್ಗಿ ರಸ್ತೆಯ ವೆಂಕಟಗಿರಿ ಹೋಟೆಲ್ ಬಳಿ ಬಸ್ ಗುರುವಾರ ಬೆಳಿಗ್ಗೆ ಮರಕ್ಕೆ ಡಿಕ್ಕಿ ಹೊಡೆಯಿತು.
ಕಲಬುರ್ಗಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.