ADVERTISEMENT

ದ್ವಿತೀಯ ದರ್ಜೆ ಸಹಾಯಕ ನೇಣಿಗೆ ಶರಣು

​ಪ್ರಜಾವಾಣಿ ವಾರ್ತೆ
Published 14 ಜೂನ್ 2019, 4:12 IST
Last Updated 14 ಜೂನ್ 2019, 4:12 IST

ಚಿಂಚೋಳಿ: ದ್ವಿತೀಯ ದರ್ಜೆ ಸಹಾಯಕರಾಗಿ ಸೇವೆ ಸಲ್ಲಿಸುತ್ತಿದ್ದ ಮಲ್ಲಿಕಾರ್ಜುನ ಸುಭಾಷ್ಚಂದ್ರ ಚಿಂಚೋಳಿಕರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಇಲ್ಲಿನ ಚಂದಾಪುರದಲ್ಲಿ ನಡೆದಿದೆ.

ಹೈಕ ಶಿಕ್ಷಣ ಸಂಸ್ಥೆಯ ಸಿ.ಬಿ.ಪಾಟೀಲ ಕಾಲೇಜಿನಲ್ಲಿ ಕಾಯಂ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಕಾಲೇಜಿನ ಪ್ರಾಚಾರ್ಯರ ವಸತಿ ಗೃಹದಲ್ಲಿ ಶುಕ್ರವಾರ ಬೆಳಿಗ್ಗೆ 1ಗಂಟೆ ಸುಮಾರಿಗೆ ಫ್ಯಾನಿಗೆ ನೇಣು ಹಾಕಿಕೊಂಡಿದ್ದಾರೆ.

ಅರ್ಥಿಕ ಸಮಸ್ಯೆ(ಸಾಲ)ಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಪ್ರಾಂಶುಪಾಲರ ವಸತಿ ಗೃಹವನ್ನು ಸಿಬ್ಬಂದಿಗಳು ಬಳಸುತ್ತಾರೆ. ಪ್ರಾಚಾರ್ಯರು ಇರಲಿಲ್ಲ ಎನ್ನಲಾಗಿದೆ.

ಮೃತರು ಮಹಾಗಾಂವ ವಾಡಿ ಗ್ರಾಮದ ನಿವಾಸಿಯಾಗಿದ್ದುಪತ್ನಿ ಹಾಗೂ ಇಬ್ಬರು ಪುತ್ರಿಯರು ಮತ್ತು ತಂದೆತಾಯಿ ಇದ್ದಾರೆ.

ಘಟನಾ ಸ್ಥಳಕ್ಕೆ ಸಬ್ ಇನಸ್ಪೆಕ್ಟರ್ ರಘು ಹಾಗೂ ಸಿಬ್ಬಂದಿ ಭೇಟಿ ನೀಡಿದರು. ಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.