ADVERTISEMENT

ಅಯೋಧ್ಯೆ ರಾಮಮಂದಿರ ಭೂಮಿಪೂಜೆ: ಕಲಬುರ್ಗಿಯಲ್ಲಿ ಆ.6 ರವರೆಗೆ ನಿಷೇಧಾಜ್ಞೆ ಜಾರಿ 

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2020, 9:35 IST
Last Updated 4 ಆಗಸ್ಟ್ 2020, 9:35 IST
ರಾಮ ಮಂದಿರ ವಿನ್ಯಾಸ ಮಾದರಿ
ರಾಮ ಮಂದಿರ ವಿನ್ಯಾಸ ಮಾದರಿ    

ಕಲಬುರ್ಗಿ: ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಾಳೆ (ಬುಧವಾರ) ರಾಮಮಂದಿರ ನಿರ್ಮಾಣದ ಭೂಮಿಪೂಜೆ ನಡೆಯಲಿದ್ದು, ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಸೆಕ್ಷನ್ 144 ಅಡಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.

ಇಂದು ಮಧ್ಯಾಹ್ನ 3 ಗಂಟೆಯಿಂದ ಆ.6 ರ ಬೆಳಿಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದು ಕಲಬುರ್ಗಿ ಪೊಲೀಸ್‌ ಆಯುಕ್ತಎನ್.ಸತೀಶಕುಮಾರ‌ತಿಳಿಸಿರುವುದಾಗಿ ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.