ಸೇಡಂ (ಕಲಬುರಗಿ ಜಿಲ್ಲೆ): ಕೋಲಿ ಕಬ್ಬಲಿಗ ಸಮಾಜದ ತಾಲ್ಲೂಕು ಘಟಕದ ಗೌರವ ಅಧ್ಯಕ್ಷ ಮಲ್ಲಿಕಾರ್ಜುನ ಮುತ್ಯಾಲ (65) ಅವರನ್ನು ಬೆಳಿಗ್ಗೆ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.
ಅವರದು ವಿಷ್ಣು ಎಲೆಕ್ಟ್ರಾನಿಕ್ಸ್ ಅಂಗಡಿಯಿತ್ತು. ನಿತ್ಯವೂ ರಾತ್ರಿ ಅಂಗಡಿಯಲ್ಲಿ ಮಲಗುತ್ತಿದ್ದರು.
ಕೊಲೆಯಾದ ಮಲ್ಲಿಕಾರ್ಜುನ ಜೆಡಿಎಸ್ ಪಕ್ಷದಲ್ಲಿದ್ದರು, ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವವರಿದ್ದರು. ಸೋಮವಾರ ನಡೆದ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ಶಿವಕುಮಾರ ಪಾಟೀಲ ತೇಲ್ಕೂರ, ಸಿಪಿಐ ಆನಂದರಾವ್, ಪಿಎಸ್ಐ ಸೋಮಲಿಂಗ ಒಡೆಯರ್ ಭೇಟಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.