ADVERTISEMENT

ಕಲಬುರ್ಗಿ: ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ತೆಲ್ಕೂರ ಆಯ್ಕೆ

​ಪ್ರಜಾವಾಣಿ ವಾರ್ತೆ
Published 8 ಜನವರಿ 2021, 9:33 IST
Last Updated 8 ಜನವರಿ 2021, 9:33 IST
ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸೇಡಂ ಶಾಸಕ ರಾಜಕುಮಾರ ‌ಪಾಟೀಲ ತೆಲ್ಕೂರ ಅವರನ್ನು ಅಭಿನಂದಿಸಲಾಯಿತು.
ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸೇಡಂ ಶಾಸಕ ರಾಜಕುಮಾರ ‌ಪಾಟೀಲ ತೆಲ್ಕೂರ ಅವರನ್ನು ಅಭಿನಂದಿಸಲಾಯಿತು.    

ಕಲಬುರ್ಗಿ: ಇಲ್ಲಿನ ಕಲಬುರ್ಗಿ-ಯಾದಗಿರಿ ಕೇಂದ್ರ ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿ ಸೇಡಂ ಶಾಸಕ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ರಾಜಕುಮಾರ ‌ಪಾಟೀಲ ತೆಲ್ಕೂರ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಸುರೇಶ ಸಜ್ಜನ ಆಯ್ಕೆಯಾದರು.

ಇಬ್ಬರಿಗೂ ತಲಾ 9 ಮತಗಳು ಬಂದವು. ಕಾಂಗ್ರೆಸ್ ಬೆಂಬಲಿತ ಮೂವರು ಅನರ್ಹರಾಗಿದ್ದರು. ಹಾಗಾಗಿ ಅವರಿಗೆ ‌ಮತಾಧಿಕಾರ ಸಿಗಲಿಲ್ಲ. ಆಡಳಿತಾಧಿಕಾರಿಯಾಗಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ‌ಶಂಕರ ವಣಿಕ್ಯಾಳ ತೆಲ್ಕೂರ ಅವರಿಗೆ ಅಧಿಕಾರ ಹಸ್ತಾಂತರ ‌ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT