
ಕಲಬುರಗಿ: ‘ಕಲ್ಯಾಣ ಕರ್ನಾಟಕ ಭಾಗದ 58 ಆಂಬುಲೆನ್ಸ್ಗಳು ಸೇರಿ ರಾಜ್ಯದಲ್ಲಿ 275 ಸಂಚಾರಿ ಪಶುಚಿಕಿತ್ಸಾ ಘಟಕದ ವಾಹನಗಳು ಕಾರ್ಯನಿರ್ವಹಿಸುತ್ತಿವೆ’ ಎಂದು ಪಶು ಸಂಗೋಪನಾ ಹಾಗೂ ರೇಷ್ಮೆ ಇಲಾಖೆ ಸಚಿವ ಕೆ.ವೆಂಕಟೇಶ ತಿಳಿಸಿದ್ದಾರೆ.
ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಸುನಿಲ್ ವಲ್ಯಾಪುರೆ ಅವರ ಸಂಖ್ಯೆಗೆ ಲಿಖಿತವಾಗಿ ಸಚಿವರು ಉತ್ತರ ನೀಡಿದ್ದಾರೆ.
‘ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಿಂದ ಪಶುಚಿಕಿತ್ಸಾ ಸೇವೆಗಳಿಗಾಗಿ 3,898 ದೂರುಗಳು ದಾಖಲಾಗಿದ್ದು, ಅವುಗಳಲ್ಲಿ ಎಲ್ಲ ದೂರುಗಳಲ್ಲಿ ಜಾನುವಾರುಗಳಿಗೆ ಚಿಕಿತ್ಸೆ ನೀಡಲಾಗಿದೆ. ರಾಜ್ಯದಲ್ಲಿ ಕುರಿಗಳು ಸಾವಿಗೀಡಾದ ಪ್ರಕರಣದಲ್ಲಿ ಸಹಾಯಧನ ನೀಡುವ ಯೋಜನೆ ಜಾರಿಯಲ್ಲಿದೆ. 3 ರಿಂದ 6ತಿಂಗಳ ಮರಿಗಳಿಗೆ ₹ 3,500, 6 ತಿಂಗಳ ಮೇಲ್ಪಟ್ಟ ಕುರಿ/ ಮೇಕೆಗಳಿಗೆ ₹ 5 ಸಾವಿರ ಪರಿಹಾರ ಧನ ನೀಡಲು ಕ್ರಮವಹಿಸಲಾಗಿದೆ’ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.