ಕಲಬುರ್ಗಿ: ಜಿಲ್ಲೆಯ ಆಳಂದ ತಾಲ್ಲೂಕಿನ ನಿಂಬರ್ಗಾ ಸಮೀಪದ ಹಿತ್ತಲ ಶಿರೂರ ಗ್ರಾಮದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಕಿಡಿಗೇಡಿಗಳು ದುಷ್ಕೃತ್ಯ ಎಸಗಿದ್ದಾರೆ.
ಶನಿವಾರ ರಾತ್ರಿ ಈ ಕೃತ್ಯ ನಡೆಸಿದ್ದು, ಭಾವಚಿತ್ರಕ್ಕೆ ಸಗಣಿ ಮತ್ತು ಚಪ್ಪಲಿ ಹಾಕಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಗಣರಾಜ್ಯೋತ್ಸವದ ಮುನ್ನಾ ದಿನವೇ ಸಂವಿಧಾನ ಶಿಲ್ಪಿಗೆ ಅವಹೇಳನ ಮಾಡಿದ್ದಾರೆ. ಈ ಕುರಿತು ಗ್ರಾಮಸ್ಥ ಅಂಬಾರಾಯ ಧೂಳಪ್ಪ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.