ADVERTISEMENT

ಬೆಳೆಹಾನಿ ಪರಿಹಾರ ವಿವರ ಪ್ರಕಟಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2022, 16:04 IST
Last Updated 19 ಸೆಪ್ಟೆಂಬರ್ 2022, 16:04 IST
ಶರಣಪ್ರಕಾಶ ಪಾಟೀಲ
ಶರಣಪ್ರಕಾಶ ಪಾಟೀಲ   

ಚಿಂಚೋಳಿ (ಕಲಬುರಗಿ ಜಿಲ್ಲೆ): ಮಳೆಯಿಂದ ಉಂಟಾಗಿರುವ ಬೆಳೆಹಾನಿಗೆ ಸರ್ಕಾರ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ ನೀಡುತ್ತಿರುವ ಪರಿಹಾರದ ವಿವರವನ್ನು ಗ್ರಾ.ಪಂಗಳಲ್ಲಿ ಪ್ರಕಟಿಸಬೇಕು ಎಂದು ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಡಾ. ಶರಣಪ್ರಕಾಶ ಪಾಟೀಲ ಒತ್ತಾಯಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾರ ಜಮೀನಿನಲ್ಲಿ ಎಷ್ಟು ಬೆಳೆ ಹಾನಿಯಾಗಿದೆ. ಯಾರಿಗೆ ಎಷ್ಟು ಪರಿಹಾರ ಅವರ ಖಾತೆಗೆ ಜಮಾ ಆಗಿದೆ ಎಂಬುದು ಜನತೆಗೆ ತಿಳಿಯಬೇಕು. ಹೀಗಾಗಿ ಪ್ರತಿ ಪಂಚಾಯಿತಿಯಲ್ಲಿ ಪರಿಹಾರದ ವಿವರ ಪ್ರಕಟಿಸುವುದು ಅತ್ಯಂತ ಅಗತ್ಯವಾಗಿದೆ’ ಎಂದರು.

‘ಸರ್ಕಾರ ಬೆಳೆ ಹಾನಿಯ ವೈಜ್ಞಾನಿಕ ಸಮೀಕ್ಷೆ ನಡೆಸಿಲ್ಲ. ಹೆಚ್ಚು ಬೆಳೆಯಾನಿಯಾದರೂ ಕಡಿಮೆ ಪ್ರಮಾಣದ ಪರಿಹಾರ ಖಾತೆಗೆ ಜಮಾ ಮಾಡಲಾಗಿದೆ. ಈ ಕುರಿತು ರೈತರು ದೂರುತ್ತಿದ್ದಾರೆ ಎಂದರು. ಈಗಲೂ ಕಾಲ ಮಿಂಚಿಲ್ಲ. ನಿಖರ ಸರ್ವೆ ನಡೆಸಿ ಹಾನಿಗೆ ತಕ್ಕಷ್ಟು ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.