ಕಲಬುರ್ಗಿ: ಬಡವರ ವೈದ್ಯ ಎಂದೇ ಖ್ಯಾತರಾಗಿದ್ದ ಡಾ.ಶಾಂತವೀರ ಬಿ. ಸುಂಕದ (78) ಅವರು ಮಂಗಳವಾರ ಬೆಳಿಗ್ಗೆ ಹೈದರಾಬಾದ್ ಆಸ್ಪತ್ರೆಯಲ್ಲಿ ನಿಧನರಾದರು.
ಅವರಿಗೆ ಪತ್ನಿ, ಮೂವರು ಪುತ್ರಿಯರು ಇದ್ದಾರೆ.
ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಚಿಂಚೋಳಿಯವರಾದ ಡಾ.ಶಾಂತವೀರ ಅವರು ಸೇಡಂ ಪಟ್ಟಣದಲ್ಲಿ ನೆಲೆಸಿ ಇತ್ತೀಚಿನವರೆಗೂ ವೈದ್ಯಕೀಯ ಸೇವೆ ಸಲ್ಲಿಸಿದ್ದರು. ವೃತ್ತಿ ಜೀವನದಲ್ಲಿ ಸುಮಾರು 2.5 ಲಕ್ಷಕ್ಕೂ ಅಧಿಕ ಕುಟುಂಬ ಕಲ್ಯಾಣ ಶಸ್ತ್ರ ಚಿಕಿತ್ಸೆಯನ್ನು ಮಾಡಿರುವ ಕಲ್ಯಾಣ ಕರ್ನಾಟಕ ಭಾಗದ ಏಕೈಕ ವೈದ್ಯರಾಗಿದ್ದರು. ಚಿಂಚೋಳಿ ಪಟ್ಟಣದ ಸ್ವಂತ ಜಮೀನಿನಲ್ಲಿ ಸೆ 29ರಂದು ಬೆಳಿಗ್ಗೆ 11.30ಕ್ಕೆ ಅಂತ್ಯ ಸಂಸ್ಕಾರ ನೆರವೇರಲಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.