ADVERTISEMENT

ಶಿಕ್ಷಕದ್ವಯರಿಗೆ ‘ಶಿಕ್ಷಕ ರತ್ನ’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2020, 11:16 IST
Last Updated 10 ಫೆಬ್ರುವರಿ 2020, 11:16 IST
ಪಂಚಾಕ್ಷರಿ ಜಿ.ಹಿರೇಮಠ    
ಪಂಚಾಕ್ಷರಿ ಜಿ.ಹಿರೇಮಠ       

ಚಿಂಚೋಳಿ: ಹಾರಕೂಡ ಚನ್ನಬಸವೇಶ್ವರ ಸಂಸ್ಥಾನ ಹಿರೇಮಠ ಕೊಡಮಾಡುವ ಪ್ರಸಕ್ತ ಸಾಲಿನ ‘ಕಲ್ಯಾಣ ಕರ್ನಾಟಕ ಶಿಕ್ಷಕ ರತ್ನ’ ಪ್ರಶಸ್ತಿಗೆ ಬಸವಕಲ್ಯಾಣದ ನಿವೃತ್ತ ಶಿಕ್ಷಕ ಪಂಚಾಕ್ಷರಿ ಜಿ. ಹಿರೇಮಠ ಹಾಗೂ ಚಂದಾಪುರದ ಬಸವರಾಜ ಐನೋಳಿ ಆಯ್ಕೆ ಆಗಿದ್ದಾರೆ.

ಪ್ರಶಸ್ತಿ ₹5 ಸಾವಿರ ರೂಪಾಯಿ ನಗದು ಹಾಗೂ ಸ್ಮರಣ ಫಲಕ ಒಳಗೊಂಡಿದೆ. ಚಂದಾಪುರದಲ್ಲಿರುವ ಹಾರಕೂಡ ಶ್ರೀ ಚನ್ನಬಸವೇಶ್ವರ ಶಿಕ್ಷಣ ಸಂಸ್ಥೆಯ ಕಾಲೇಜಿನಲ್ಲಿ ಫೆ.29 ರಂದು ನಡೆಯುವ 28ನೇ ವಾರ್ಷಿಕೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥಾನದ ಪೀಠಾಧಿಪತಿ ಡಾ. ಚನ್ನವೀರ ಶಿವಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT