ADVERTISEMENT

ಕಲಬುರಗಿ: ​​​​​​​ಕಾಂಗ್ರೆಸ್ ಮುಖಂಡನ ಸಹೋದರನ ಮೇಲೆ ಗುಂಡಿನ ದಾಳಿ

​ಪ್ರಜಾವಾಣಿ ವಾರ್ತೆ
Published 7 ಜನವರಿ 2023, 9:34 IST
Last Updated 7 ಜನವರಿ 2023, 9:34 IST
ಗಾಯಗೊಂಡಿರುವ ಚೆನ್ನವೀರ ದಣ್ಣೂರ
ಗಾಯಗೊಂಡಿರುವ ಚೆನ್ನವೀರ ದಣ್ಣೂರ   

ಕಲಬುರಗಿ: ನಗರದ ಆಳಂದ ಚೆಕ್ ಪೋಸ್ಟ್ ಹತ್ತಿರದಲ್ಲಿ ಇಂದು ಮಧ್ಯಾಹ್ನ ಜೀಪಿನಲ್ಲಿ ಬಂದ ದುಷ್ಕರ್ಮಿಗಳು ಚೆನ್ನವೀರ ಪಾಟೀಲ ದಣ್ಣೂರ ಎಂಬುವವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಗಾಯಗೊಂಡ ಚನ್ನವೀರ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಸಂತೋಷ ಪಾಟೀಲ ದಣ್ಣೂರ ಅವರ ಸಹೋದರ.

ಬೊಲೆರೊ ವಾಹನದಲ್ಲಿ ಬಂದ ದುಷ್ಕರ್ಮಿಗಳು ಚನ್ನವೀರ ಕೈಗೆ ಗುಂಡು ಹಾರಿಸಿ ಪರಾರಿಯಾದರು.

ADVERTISEMENT

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುತ್ತಿದ್ದ ಕೆಡಿಪಿ ಸಭೆಯಲ್ಲಿ ಭಾಗವಹಿಸಿದ್ದ ಡಿಸಿಪಿ ಅಡ್ಡೂರು ಶ್ರೀನಿವಾಸಲು ಘಟನೆಯ ಮಾಹಿತಿ ದೊರೆತ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.