ADVERTISEMENT

ಚಿತ್ತಾಪುರ ತಾಲ್ಲೂಕಿನಲ್ಲಿ ಹಾವು ಕಚ್ಚಿ ಬಾಲಕ ಸಾವು

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2021, 8:02 IST
Last Updated 18 ಫೆಬ್ರುವರಿ 2021, 8:02 IST
ಅಶ್ವಿತ್
ಅಶ್ವಿತ್   

ಲಾಡ್ಲಾಪುರ (ವಾಡಿ): ಹಾವು ಕಡಿತದಿಂದ ಬಾಲಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಚಿತ್ತಾಪುರ ತಾಲ್ಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ಜರುಗಿದೆ.

ಅಶ್ವಿತ್ ರಾಜು ದಂಡೋತಿ (5) ಮೃತಪಟ್ಟ ಬಾಲಕ.

ತಾಯಿಯೊಂದಿಗೆ ಜಮೀನಿಗೆ ತೆರಳಿದ್ದ ಸಂದರ್ಭದಲ್ಲಿ ಹಾವು ಕಚ್ಚಿದೆ. ತಕ್ಷಣವೇ ಮಗುವಿನ ಪೋಷಕರು ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗದೇ ಮಂತ್ರವಾದಿಯ ಬಳಿ ಕರೆದುಕೊಂಡು ಹೋಗಿದ್ದಾರೆ. ಅಲ್ಲಿಯೂ ಸಮಧಾನವಾಗದೇ ನಾಲವಾರ ಗ್ರಾಮದ ಮತ್ತೊಬ್ಬ ಮಂತ್ರವಾದಿಯ ಬಳಿ ಹೋಗಿದ್ದಾರೆ
ಎನ್ನಲಾಗಿದೆ.

ADVERTISEMENT

ಕೊನೆಗೆ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ಮಗು ನಿಧನ ಹೊಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.