ಕಲಬುರ್ಗಿ: ಸೋಮವಂಶ ಸಹಸ್ರಾರ್ಜುನ ಮಹಾರಾಜರ ಜಯಂತ್ಯುತ್ಸವದ ಅಂಗವಾಗಿ ಎಸ್ಎಸ್ಕೆ ಸಮುದಾಯದವರು ನಗರದಲ್ಲಿ ಭಾನುವಾರ ಮಹಾರಾಜರ ಭಾವಚಿತ್ರದ ಅದ್ಧೂರಿ ಮೆರವಣಿಗೆ ಜರುಗಿತು.
ಜಯಂತಿ ಪ್ರಯುಕ್ತ ಶಹಾಬಜಾರ್ನ ಜಗದಂಬಾ ಮಂದಿರದಿಂದ ಆರಂಭವಾದ ಮೆರವಣಿಗೆ ಸೂಪರ್ ಮಾರ್ಕೆಟ್ವರೆಗೆ ನಡೆಯಿತು.
ಈ ಸಂದರ್ಭದಲ್ಲಿ ಸಮಾಜದ ಅಧ್ಯಕ್ಷ ಶ್ರೀರಾಮ ಪವಾರ, ಪ್ರಕಾಶ ಮೆಂಗಜಿ, ವಿಷ್ಣುಸಾ ಬಾರಾಡ, ಸುಭಾಷ್ ಕಮಲಾಪುರ, ರವೀಂದ್ರಕುಮಾರ ಮೆಂಗಜಿ, ಅನಿಲ್ ಮಿಸ್ಕಿನ್, ಡಾ.ಯಶವಂತರಾವ್ ಮೆಂಗಜಿ ಸೇರಿದಂತೆ ಸಮಾಜದ ಮಹಿಳೆಯರು, ಯುವಕರು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.