ಹುಬ್ಬಳ್ಳಿ: ಇಲ್ಲಿನ ಕುಲಕರ್ಣಿ ಹಕ್ಕಲದಲ್ಲಿ ತಾಯಿಗೆ ಕೊರೊನಾ ಪಾಸಿಟಿವ್ ಬಂದ ಕಾರಣಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೊಬೈಲ್ ಫೋನ್ ಕಂಪನಿಯಲ್ಲಿ ಕೆಲಸಮಾಡುತ್ತಿದ್ದ ರಾಕೇಶ ರಾಜೇಂದ್ರನ್ ದರ್ಮನ್ ಎಂಬಾತನೇಆತ್ಮಹತ್ಯೆ ಮಾಡಿಕೊಂಡವರು.
ಮೃತನ ತಾಯಿಗೆ ಕೋವಿಡ್ 19 ಧೃಢ ಪಟ್ಟಿತ್ತು. ರೈಲ್ವೆ ಆಸ್ಪತ್ರೆಯಲ್ಲಿ ಸಫಾಯಿವಾಲಾ ಅಗಿದ್ದ ಅವರಿಗೆ ರೈಲ್ವೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಮನೆ ಸೀಲ್ಡೌನ್ ಮಾಡಿ ರಾಕೇಶ್ ಗೆ ಹೋಂ ಕ್ವಾರಂಟೈನ್ ನಲ್ಲಿರುವಂತೆ ಸೂಚಿಸಲಾಗಿತ್ತು. ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.