ಕಲಬುರ್ಗಿ: ರಾಜ್ಯದಲ್ಲಿ ಹೆಚ್ಚುತ್ತಿರುವ ಡ್ರ್ಗಗ್ಸ್ ನಂತಹ ಮಾದಕ ವಸ್ತುಗಳ ಮಾರಾಟ ಜಾಲವನ್ನು ಪತ್ತೆ ಹಚ್ಚಿ ಶಿಕ್ಷಿಸುವ ಮೂಲಕ ಯುವ ಜನತೆ ದಾರಿ ತಪ್ಪುವುದನ್ನು ತಡೆಯಬೇಕು ಎಂದು ಒತ್ತಾಯಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.
ಡ್ರಗ್ಸ್ ಮಾರಾಟ ಹಾಗೂ ಸಾಗಾಟ ಮಾಡುವವರನ್ನು ರಾಷ್ಟ್ರೀಯ ಸುರಕ್ಷತಾ ಕಾಯ್ದೆಯಡಿ ಬಂಧಿಸಲು ಅವಕಾಶ ನೀಡುವ ಕಾನೂನು ತರಬೇಕು. ಶಾಲಾ, ಕಾಲೇಜುಗಳ ಪರಿಸರದಲ್ಲಿ ಗುಪ್ತಚರ ಇಲಾಖೆಯ ಗಸ್ತು ಹೆಚ್ಚಿಸಬೇಕು. ಯಾವ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಡ್ರಗ್ಸ್ ಪತ್ತೆಯಾಗುತ್ತದೋ ಅಂತಹ ಠಾಣೆಯ ಅಧಿಕಾರಿಗಳನ್ನು ಇದಕ್ಕೆ ಹೊಣೆ ಮಾಡಬೇಕು. ಪಬ್, ಕ್ಲಬ್, ಲೈವ್ ಬ್ಯಾಂಡ್, ಸ್ಟಾರ್ ಹೋಟೆಲ್ಗಳಲ್ಲಿ ನಿರಂತರ ತಪಾಸಣೆ ನಡೆಸಬೇಕು ಎಂದು ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.